ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದರೆ, ರಾಜ್ಯದಲ್ಲಿ 6 ಜಿಲ್ಲೆಗಳಲ್ಲಿ ವಾಡಿಕೆಗಿಂತ ಸಾಧಾರಣ ಮಳೆಯಾಗಿದೆ ಎಂದರು.
ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿ ಜಲಾಶಯಗಳು ಭರ್ತಿಯಾಗಿರುವುದರಿಂದ ನೀರು ಹೊರ ಬಿಡಲಾಗುತ್ತಿದೆ. ಹೇಮಾವತಿ ಸಹ ತುಂಬಿ ಹರಿಯುತ್ತಿದೆ. ಜಲಾಶಯದಿಂದ ಹೆಚ್ಚು ನೀರು ಬಿಡಲಾಗಿದೆ. ಕೆಆರ್ಎಸ್ ಅಣೆಕಟ್ಟೆಯಿಂದ 1.20 ಲಕ್ಷ ಕ್ಯುಸೆಕ್ಗೂ ಹೆಚ್ಚು ನೀರು ಬಿಡಲಾಗುತ್ತಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅವುಗಳನ್ನೆಲ್ಲ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.ಕೇರಳದ ವೈನಾಡಿನಲ್ಲಿ ಹೆಚ್ಚು ಮಳೆಯಾಗಿದೆ, ಕಬಿನಿ ಜಲಾಶಯ ತುಂಬಿದೆ, ಅಲ್ಲಿಯೂ 80 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಒಟ್ಟಾರೆ ಕೆಆರ್ಎಸ್-ಕಬಿನಿಯಿಂದ 1.50 ಲಕ್ಷ ಕ್ಯುಸೆಕ್ ನೀರು ಬಿಳಿಗುಂಡಲಿನಿಂದ ತಮಿಳುನಾಡಿಗೆ ಹೋಗುತ್ತಿದೆ. ಇದಕ್ಕೆಲ್ಲಾ ಲೆಕ್ಕವಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ತಗ್ಗು ಪ್ರದೇಶಗಳಲ್ಲಿ ಹಾನಿಯಾಗಿರುವ ಬಗ್ಗೆ ಮಾಹಿತಿಗಳು ಬಂದಿವೆ. ರಾಜ್ಯ ಸರ್ಕಾರದಲ್ಲಿ ಇರುವ ಹಣ ಬಳಕೆ ಮಾಡಿಕೊಂಡು ಪರಿಹಾರದ ವ್ಯವಸ್ಥೆ ಮಾಡಲಾಗುತ್ತದೆ. ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ರು. ಹಣವನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು.
2022-23ರಲ್ಲಿ 12 ಹೆಕ್ಟೇರ್ ನಷ್ಟು ಹಾನಿಯಾಗಿತ್ತು. ಸದ್ಯಕ್ಕೆ ಯಾವುದೇ ಸಾವು ಸಂಭವಿಸಿಲ್ಲ. ಈಗಾಗಲೇ ಜಿಲ್ಲಾಡಳಿತ ಚುರುಕು ಮೂಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಕಡೆ ಅಲರ್ಟ್ ಆಗಿರಬೇಕು. ನದಿಯಲ್ಲಿ ನೀರು ಹೆಚ್ಚಳವಾಗುತ್ತದೆ. ಸಾರ್ವಜನಿಕರು ಸಹ ನದಿಗಿಳಿದು ಸೆಲ್ಫಿ ತೆಗೆದುಕೊಳ್ಳಲು ಹೋಗಬಾರದು. ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.