ಕನ್ನಡಪ್ರಭ ವಾರ್ತೆ ಭದ್ರಾವತಿ
ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ಧಮೇಂದ್ರರವರು ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ೯ ವರ್ಷಗಳ ಹಿಂದೆ ಸರ್ಕಾರಿ ಶಾಲೆಯ ೫೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯ ಆರಂಭಿಸಿದ್ದು, ಇದೀಗ ೫೦೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ.
ಕಳೆದ ವರ್ಷ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಒಟ್ಟು ಸುಮಾರು ೧೮ ಸಾವಿರ ಪುಸ್ತಕಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ನೆರವಾಗಿದ್ದರು.ಈ ಬಾರಿ ನಾರಾಯಣಪುರ, ತಳ್ಳಿಕಟ್ಟೆ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ತಾಂಡ, ಆಟಿಕೆರೆ ಕ್ಯಾಂಪ್, ಜಯನಗರ, ಅರಳಿಹಳ್ಳಿ, ದೇವರಹಳ್ಳಿ, ವಿಜಯನಗರ, ವೀರಾಪುರ, ರಾಮನಗರ, ಗುಡ್ಡದನೇರಳೆಕೆರೆ, ತಿಮ್ಲಾಪುರ, ಕೊಮಾರನಹಳ್ಳಿ, ಸೀಗೆಬಾಗಿ, ಜಯನಗರ ಕ್ಯಾಂಪ್, ಭದ್ರಾ ಕಾಲೋನಿ, ಬಾಬಳ್ಳಿ, ಕಾಗೇಕೋಡಮಗ್ಗಿ, ಸಂಜೀವ್ ನಗರ, ಸಿದ್ದರಾಮಮಟ್ಟಿ ಹಾಗು ಇತರ ಗ್ರಾಮಗಳ ೪೫ ಶಾಲೆಗಳ ಮಕ್ಕಳಿಗೆ ಒಟ್ಟು ೨೫ ಸಾವಿರ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಗುತ್ತಿದೆ.
ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಆವಾರ್ಡ್-೨೦೨೫ ಪ್ರಶಸ್ತಿ ಪುರಸ್ಕೃತರು:
ಜೂ.೧೩ರ ಬೆಳಿಗ್ಗೆ ೮ ರಿಂದ ೯ ಗಂಟೆವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮನಗರ, ೯ ರಿಂದ ೧೦ ಗಂಟೆವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಳಿಹಳ್ಳಿ ಮತ್ತು ೧೧.೩೦ ರಿಂದ ೧೨.೩೦ರ ವರೆಗೆ ಹರಿಹರೇಶ್ವರ ಪ್ರೌಢಶಾಲೆ, ಕೂಡ್ಲಿಗೆರೆ ಹಾಗೂ ಮಧ್ಯಾಹ್ನ ೨ ಗಂಟೆಯಿಂದ ೩ ಗಂಟೆವರೆಗೆ ನಂಜುಂಡೇಶ್ವರ ಪ್ರೌಢಶಾಲೆ, ನಾಗತಿಬೆಳಗಲು ಉಚಿತ ನೋಟ್ ಪುಸ್ತಕ ವಿತರಣೆ ನಡೆಯಲಿದೆ.