ಶಾಲೆಗಳಲ್ಲಿ 29 ಅಂಶ ಕಾರ್ಯಕ್ರಮ ಕಡ್ಡಾಯ ಜಾರಿಯಾಗಲಿ: ಡಿಸಿ ಶಿಲ್ಪಾ ಶರ್ಮಾ

KannadaprabhaNewsNetwork |  
Published : Jul 26, 2025, 12:00 AM IST
ಚಿತ್ರ 25ಬಿಡಿಆರ್50 | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಇತ್ತಿಚೇಗೆ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಪರಖ ರಾಷ್ಟ್ರೀಯ ಸರ್ವೇಕ್ಷಣಾ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಇಲಾಖೆ ಹೊರಡಿಸಿರುವ 29 ಅಂಶಗಳ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕ್ರೈಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳ ಮತ್ತು ಕೇಂದ್ರ ಸರ್ಕಾರದ ನವೋದಯ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಂದು ಶಾಲೆಗಳ ಮುಖ್ಯ ಶಿಕ್ಷಕರಿಂದ ತಮ್ಮ ಶಾಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಕೊಂಡರು. ಮತ್ತು ಯಾವ ರೀತಿ ಪಾಠ ಬೋಧಿಸಬೇಕು, ಶಾಲೆಯಲ್ಲಿ ಕೈಗೊಳ್ಳಬಹುದಾದ ನಾವೀನ್ಯಯುತ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ನೀಡಿದರು.

ಪರಖ ರಾಷ್ಟ್ರೀಯ ಸರ್ವೇಕ್ಷಣಾ ಸಮೀಕ್ಷೆಯ ಪ್ರಕಾರ ಜಿಲ್ಲೆಯ ಫಲಿತಾಂಶ ಕಡಿಮೆ ಇರುವ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಈ ರೀತಿಯ ಫಲಿತಾಂಶ ಮರುಕಳಿಸದಂತೆ ಎಲ್ಲಾ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬಸವಕಲ್ಯಾಣ ಸಹಾಯಕ ಆಯುಕ್ತರಾದ ಮುಕುಲ್‌ ಜೈನ್ ಮಾತನಾಡಿ, ಮುಖ್ಯ ಶಿಕ್ಷಕರಿಗೆ ಯಾವ ರೀತಿ ಗಣಿತ ಮತ್ತು ವಿಜ್ಷಾನ ವಿಷಯದ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ ಮಾಡಬೇಕು ಎಂಬುದರ ಕುರಿತು ಹಾಗೂ ಬಹು ಆಯ್ಕೆ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬುದರ ಕುರಿತು ಸವಿವರ ಮಾಹಿತಿ ನೀಡಿದರು.

ಪ್ರೊಬೆಷನರ್ ಐ.ಎ.ಎಸ್ ಅಧಿಕಾರಿಗಳಾದ ರಮ್ಯಾ ಅವರು ಸಮಾಜ ವಿಷಯದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರು, ಉಪನ್ಯಾಸಕರು, ಡಿ.ವೈ.ಪಿ.ಸಿ. ಗಳು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ