- ಪಾಂಡು ಶವ ಪತ್ತೆ, ಗಣೇಶನ ಶವಕ್ಕಾಗಿ ಈಜುಗಾರರಿಂದ ಹುಡುಕಾಟ - ಸ್ಥಳಕ್ಕೆ ದೌಡಾಯಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಪೋಷಕರಿಗೆ ಸಾಂತ್ವನ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ಕುರ್ಕಿ ಗ್ರಾಮದ ಪಾಂಡು (16), ತುರ್ಚಘಟ್ಟ ಗ್ರಾಮದ ಗಣೇಶ (16) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರು. ತುರ್ಚಘಟ್ಟದ ಗುರುಕುಲ ವಸತಿ ಶಾಲೆಯಲ್ಲಿ ಈ ಬಾಲಕರು ಎಸ್ಸೆಸ್ಸೆಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ಶಾಲೆಗೆ ರಜೆ ಇದ್ದರಿಂದ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಇಬ್ವರು ಕುರ್ಕಿ ಗ್ರಾಮಕ್ಕೆ ಬಂದಿದ್ದಾರೆ.
ಗ್ರಾಮದ ಬಳಿ ಹರಿಯುತ್ತಿರುವ ದೊಡ್ಡದಾದ ಭದ್ರಾ ಕಾಲುವೆಯಲ್ಲಿ ಪಾಂಡು ಮತ್ತು ಗಣೇಶ ಈಜಲು ನೀರಿಗೆ ಇಳಿದಿದ್ದಾರೆ. ಪಾಂಡುಗೆ ಈಜು ಬರುತ್ತಿತ್ತು, ಆದರೆ, ಗಣೇಶನಿಗೆ ಈಜಲು ಬರುತ್ತಿರಲಿಲ್ಲ. ಮೊದಲು ಪಾಂಡು ಕಾಲುವೆಗೆ ಜಿಗಿದು ಈಜಾಡುತ್ತಿದ್ದ. ಅನಂತರ ಗಣೇಶ ಸಹ ನೀರಿಗೆ ಜಿಗಿದಿದ್ದಾನೆ. ಈ ವೇಳೆ ಗಣೇಶ ಮುಳುಗಿ ಏಳುತ್ತಿದ್ದಾಗ ಪಾಂಡು ಅವನ ರಕ್ಷಣೆಗೆ ಯತ್ನಸಿದ್ದಾನೆ. ಈ ಸಂದರ್ಭದಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಬಾಲಕರು ಈಜುತ್ತಿದ್ದ ಸಮೀಪವೇ ಗೇಟು ಇದ್ದು, ಈ ಗೇಟ್ ಬಳಿ ಪಾಂಡು ಮೃತದೇಹ ಪತ್ತೆಯಾಗಿದ್ದು, ಗಣೇಶ್ ಮೃತದೇಹ ಸಿಕ್ಕಿಲ್ಲ.ಶಾಸಕ ಬಸವಂತಪ್ಪ ಭೇಟಿ:
- - -
-2ಕೆಡಿವಿಜಿ42: ಪಾಂಡು -2ಕೆಡಿವಿಜಿ43: ಗಣೇಶ -2ಕೆಡಿವಿಜಿ33, 34.ಜೆಪಿಜಿ: ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ನಾಲೆಯಲ್ಲಿ ಈಜಲು ಹೋದ ಬಾಲಕರು ನೀರು ಪಾಲಾದ ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿದರು.