ಮಕ್ಕಳ ದಸರಾ- ವಿವಿಧ ಕಾರ್ಯಕ್ರಮಗಳ ಆಯೋಜನೆ

KannadaprabhaNewsNetwork |  
Published : Oct 02, 2024, 01:12 AM IST
123 | Kannada Prabha

ಸಾರಾಂಶ

ಅ.4 ರಂದು ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಮೈಸೂರು

ಮಕ್ಕಳ ದಸರಾ- 2024 ಅಂಗವಾಗಿ ಅ.3 ಮತ್ತು 4 ರಂದು ಗ್ರಾಮೀಣ ಮಕ್ಕಳ ದಸರಾ ಪ್ರದರ್ಶನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ತಾಲೂಕುಗಳಿಗೆ ತಲಾ ಎರಡು ಬಸ್ ಗಳಂತೆ 100 ವಿದ್ಯಾರ್ಥಿಗಳು ಮೈಸೂರಿಗೆ ಆಗಮಿಸಿ ಸ್ಥಳೀಯ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಅ.4 ರಂದು ಮಕ್ಕಳ ದಸರಾ ವೈಭವದ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ರಸ್ತೆ ಮೂಲಕ ಮಹಾರಾಜ ಸರ್ಕಾರಿ ಪ್ರೌಢಶಾಲೆ ಜೆ.ಎಲ್.ಬಿ ರಸ್ತೆಯ ವರೆಗೆ ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರ ಪ್ರೌಢಶಾಲಾ ಮಕ್ಕಳು ಮೆರವಣಿಗೆ ತೆರಳುವ ಮೂಲಕ ಹಾಡಿ/ ಕಾಡು ಮಕ್ಕಳ ಕುಣಿತ, ಜಾನಪದ ನೃತ್ಯ, ಸಾಂಸ್ಕೃತಿಕ ನೃತ್ಯ, ಗಾರುಡಿ ಗೊಂಬೆ, ಹುಲಿವೇಷ, ವೀರಗಾಸೆ, ಪೂಜಾ ಕುಣಿತ, ಡೊಳ್ಳು ಕುಣಿತ, ಬ್ಯಾಂಡ್ಸೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ ಹಾಗೂ ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳು, ಸ್ವತಂತ್ರ ಹೋರಾಟಗಾರರು ಮತ್ತು ಪರಿಸರ ಸಂರಕ್ಷಣೆಯಂತಹ ವಿಷಯಗಳನ್ನೊಳಗೊಂಡ ವಿವಿಧ ವೇಷಭೂಷಣ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಅ.5ರ ಬೆಳಗ್ಗೆ 10ಕ್ಕೆ ಮಹಾರಾಣಿ ಕಾಲೇಜಿನ ಟಿಟಿಐನಲ್ಲಿ ದೇಸಿ ಆಟಗಳ ಸ್ಪರ್ಧೆಗಳ ಆಯೋಜಿಸಲಾಗಿದೆ. ಅ.6 ಮತ್ತು 7 ರಂದು ಕಲಾಮಂದಿರದಲ್ಲಿ ಮಕ್ಕಳ ದಸರಾ- ಮಕ್ಕಳಿಂದ ಮಕ್ಕಳಿಗಾಗಿಯೇ ನಡೆಯು ದಸರಾ ದರ್ಬಾರ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಅ.6 ರಂದು ಕಾರ್ಯಕ್ರಮದ ಉದ್ಘಾಟನೆಯ ನಂತರ ಸರ್ಕಾರಿ ಶಾಲಾ ಮಕ್ಕಳಿಂದ ಗೀತಸೌರಭ, ವಿಶೇಷ ಸಾಧನೆ ಮಾಡಿದ ಪ್ರತಿಭಾವಂತ ಮಕ್ಕಳ ಕಾರ್ಯಕ್ರಮ, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ವೈಭವ, ಸೈಬರ್ ಸುರಕ್ಷತೆ, ವಿಜ್ಞಾನ ನಾಟಕ, ಚಿತ್ರಕಲಾ ಸ್ಪರ್ಧೆ ಇನ್ನಿತರ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅ.7 ರಂದು ತಬಲಾ ತರಂಗ, ನವದುರ್ಗಿ ನೃತ್ಯರೂಪಕ, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಂದ ನೃತ್ಯ, ವಿಶೇಷ ಚೇತನ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ, ಒನಕೆ ಓಬವ್ವ ನೃತ್ಯ ರೂಪಕ, ಮಣಿಪುರಿ, ಅಸ್ಸಾಮಿ ಮತ್ತು ಟಿಬೇಟಿಯನ್ ನೃತ್ಯ, ಮಾವುತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುವ ವಿವಿಧ ವೇಷಭೂಷಣ ಕಾರ್ಯಕ್ರಮ, ಕೋಲಾಟ, ಏಕಪಾತ್ರಾಭಿನಯ, ಫೇಸ್ ಪೇಂಟಿoಗ್ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮಕ್ಕೆ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಮತ್ತು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳ ದಸರಾ ನಡೆಯುವ ಎರಡೂ ದಿನಗಳಲ್ಲೂ ಕಲಾಮಂದಿರದ ಆವರಣದಲ್ಲಿ ಎಲ್ಲಾ ಬ್ಲಾಕ್‌ ಗಳಿಂದ ವಿವಿಧ ಥೀಮ್‌ ಗಳಡಿಯಲ್ಲಿ 15 ಮಳಿಗೆಗಳ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!