ಹಣ ವಸೂಲಿ ಆರೋಪ: ಇಬ್ಬರು ಪೇದೆ ಅಮಾನತು

KannadaprabhaNewsNetwork |  
Published : Sep 01, 2024, 01:50 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಚೆಕ್ ಪೋಸ್ಟ್‌ ಕರ್ತವ್ಯದ ವೇಳೆ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮಾಡುತ್ತ, ಅಮಾಯಕ ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ: ಚೆಕ್ ಪೋಸ್ಟ್‌ ಕರ್ತವ್ಯದ ವೇಳೆ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮಾಡುತ್ತ, ಅಮಾಯಕ ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

ಅಂಕಳಪ್ಪ ಹಾಗೂ ಮುಬಾರಕ್ ಅಮಾನತುಗೊಂಡ ಪೇದೆಗಳು. ನಗರದ ಬೇತೂರು ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ದಾವಣಗೆರೆ ಮಾರ್ಗವಾಗಿ ಬರುವ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳ ರೈತರಿಂದ ಹಣ ವಸೂಲಿ ಮಾಡುತ್ತಿದ್ದರು. ಅಲ್ಲದೇ, ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಆರೋಪವನ್ನು ಇಬ್ಬರೂ ಸಿಬ್ಬಂದಿ ಎದುರಿಸುತ್ತಿದ್ದರು.

ಆಜಾದ್ ನಗರ ಠಾಣೆಯ ಆರೋಪಿತ ಸಿಬ್ಬಂದಿ ಅಂಕಳಪ್ಪ, ಮುಬಾರಕ್‌ ವಿರುದ್ಧ ಇಲಾಖೆ ಶಿಸ್ತುಕ್ರಮಕ್ಕೆ ಆಜಾದ್ ನಗರ ವೃತ್ತ ನಿರೀಕ್ಷಕರು ನೀಡಿದ ವರದಿ ಮೇಲೆ ನಗರ ಡಿವೈಎಸ್ಪಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಇಬ್ಬರೂ ಸಿಬ್ಬಂದಿ ವಿರುದ್ಧ ಮುಂದಿನ ಇಲಾಖೆ ಶಿಸ್ತು ಕ್ರಮ ಬಾಕಿ ಇರಿಸಿಕೊಂಡು, ತಕ್ಷದಿಂದಲೇ ಜಾರಿಗೊಳ್ಳುವಂತೆ ಸೇವೆಯಿಂದ ಅಮಾನತುಗೊಳಿಸಿ, ಜಿಲ್ಲಾ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''