ಲೋಕ ಅದಾಲತ್‌ನಲ್ಲಿ ಒಂದಾದ ಎರಡು ಜೋಡಿ

KannadaprabhaNewsNetwork |  
Published : Jul 13, 2025, 01:18 AM IST
ಪೋಟೊ12ಕೆಎಸಟಿ3: ಕುಷ್ಟಗಿ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಒಂದಾದ ಜೋಡಿಗಳು. | Kannada Prabha

ಸಾರಾಂಶ

ಸಮಸ್ಯೆ ಪರಿಹರಿಸಿಕೊಂಡು ಒಂದಾದ ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು, ಸಿಹಿ ತಿನ್ನಿಸುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟರು. ನ್ಯಾಯಾಧೀಶರು ಒಂದಾದ ಜೋಡಿಗಳಿಗೆ ಪುಷ್ಪ ಹಾಕುವ ಮೂಲಕ ಒಂದಾಗಿ ಬಾಳುವಂತೆ ಹಾರೈಸಿದರು.

ಕುಷ್ಟಗಿ:

ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ಕಾರಣಗಳಿಂದ ಮೂರ್ನಾಲ್ಕು ವರ್ಷಗಳಿಂದ ದೂರವಾಗಿದ್ದ ಎರಡು ವಿವಾಹಿತ ಜೋಡಿಗಳು ರಾಜೀ ಸಂಧಾನದ ಮೂಲಕ ಒಂದಾಗಿದ್ದಾರೆ.

ಸಮಸ್ಯೆ ಪರಿಹರಿಸಿಕೊಂಡು ಒಂದಾದ ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು, ಸಿಹಿ ತಿನ್ನಿಸುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟರು. ನ್ಯಾಯಾಧೀಶರು ಒಂದಾದ ಜೋಡಿಗಳಿಗೆ ಪುಷ್ಪ ಹಾಕುವ ಮೂಲಕ ಒಂದಾಗಿ ಬಾಳುವಂತೆ ಹಾರೈಸಿದರು.ತಿಳಿವಳಿಕೆ ನೀಡಿದ ನ್ಯಾಯಾಧೀಶರು:

ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಸೇರಿದಂತೆ ಇತರೆ ನ್ಯಾಯಾಧೀಶರು ಹಾಗೂ ದಾವೆ ಹೂಡಿದ ವಕೀಲರು, ಕುಟುಂಬದಲ್ಲಿ ಸಣ್ಣ-ಪುಟ್ಟ ಜಗಳಗಳು ಬರುವುದು ಸಹಜ. ಗಂಡ-ಹೆಂಡತಿ ಇಬ್ಬರು ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಮಕ್ಕಳ ಅಭಿವೃದ್ಧಿ ಸಲುವಾಗಿ ಇಬ್ಬರು ಪರಸ್ಪರವಾಗಿ ಹೊಂದಾಣಿಕೆಯಿಂದ ಜೀವನ ನಡೆಸಬೇಕು ಎಂದು ತಿಳಿವಳಿಕೆ ನೀಡಿದರು.

ಮಲ್ಲಪ್ಪ ಶಿರಗುಂಪಿ ಹಾಗೂ ಹುಲಿಗೆಮ್ಮ ನಾಯಕ, ಸತೀಶ ಮತ್ತು ಶರಣಮ್ಮ ದಂಪತಿ ಒಂದಾದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ, ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ, ನಿಂಗಪ್ಪ ಸುದ್ದಿ, ಪಂಚಾಕ್ಷರಿ ಹುನಗುಂದ, ಎಂ.ಎಸ್. ಹೇರೂರು, ಬಿ.ಡಿ. ಅಪ್ಪೋಜಿ, ಸುಶೀಲಾ ಮಂಗಳೂರು ಸೇರಿದಂತೆ ಅನೇಕ ವಕೀಲರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ