ಕನ್ನಡಪ್ರಭ ವಾರ್ತೆ, ದಾವಣಗೆರೆ ಪ್ರತ್ಯೇಕ ಪ್ರಕರಣಗಳಲ್ಲಿ ಸಾಲದ ಶೂಲಕ್ಕೆ ಹೆದರಿ ಓರ್ವ ರೈತ ಮಹಿಳೆ ಸೇರಿದಂತೆ ಇಬ್ಬರು ರೈತರು ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.
ಎಳೆಹೊಳೆ ರೈತ ಅಶೋಕ ಕೃಷಿ ಮತ್ತು ಟ್ರ್ಯಾಕ್ಟರ್ ಖರೀದಿಗೆ ₹4 ಲಕ್ಷ, ಖಾಸಗಿಯಾಗಿ ₹6 ಲಕ್ಷ ಸಾಲ ಮಾಡಿದ್ದರು. 3 ವರ್ಷದಿಂದ ಸಮರ್ಪಕ ಮಳೆಯಾಗದೇ, ಬೆಳೆ ಕೈಕೊಟ್ಟಿತ್ತು. ಇದರಿಂದ ತೀವ್ರವಾಗಿ ನೊಂದಿದ್ದ ಅಶೋಕ ಕ್ರಿಮಿನಾಶಕ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕುಂಕುವ ತಾಂಡಾದ ಕಮಲಾಬಾಯಿ 2 ಎಕರೆ ಜಮೀನಿನಲ್ಲಿ 1 ವರ್ಷದ ಹಿಂದೆ ಅಡಕೆ ತೋಟ ಮಾಡಿದ್ದರು. ಮಗಳ ಮದುವೆಗೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹50 ಸಾವಿರ, ತೋಟಕ್ಕಾಗಿ ₹5.40 ಲಕ್ಷ ಸಾಲ ಮಾಡಿದ್ದರು. ಮಳೆ ಕೈ ಕೊಟ್ಟಿದ್ದರಿಂದ ನಿರೀಕ್ಷಿತ ಬೆಳೆ ಕೈ ಸೇರದೇ ತೀವ್ರವಾಗಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.- - -