ಹುಬ್ಬಳ್ಳಿ:
20 ಮನೆಗೆ ಹಾನಿ:ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ವರೆಗೆ 18 ಮನೆಗೆ ಹಾನಿಯಾಗಿದ್ದರೆ ಶನಿವಾರ ಮತ್ತೆ ಎರಡು ಮನೆಗೆ ಹಾನಿಯಾಗಿದೆ. ಇದರಿಂದ ಮನೆಗಳ ಹಾನಿ ಸಂಖ್ಯೆ 20ಕ್ಕೆ ಏರಿದೆ. ತಾಲೂಕಿನ ಚನ್ನಾಪೂರದ ಮನೆ ಗೋಡೆ ಕುಸಿತದಲ್ಲಿ ಗ್ರಾಮದ ಯಲ್ಲವ್ವ ಫಕ್ಕೀರಪ್ಪ ನಡೂರ, ಮುತ್ತಪ್ಪ ಫಕ್ಕೀರಪ್ಪ ನಡೂರ, ಗಂಗವ್ವ ಗುರುಸಿದ್ದಪ್ಪ ಹುಲಮನಿ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ತಹಸೀಲ್ದಾರ್ ಪ್ರಕಾಶ ನಾಶಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ತಗ್ಗು ಗುಂಡಿಗಳಲ್ಲಿ ನೀರು:ಮಹಾನಗರದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಬಡಾವಣೆ ರಸ್ತೆಗಳಲ್ಲಿನ ತಗ್ಗು ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಯಿತು. ಅನೇಕ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ಬಿದ್ದ ಪರಿಣಾಮ ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನಿರಂತರವಾಗಿ ಬೀಳುತ್ತಿರುವ ತುಂತುರು ಮಳೆಗೆ ಮಣ್ಣಿನ ರಸ್ತೆಗಳು ಕೆಸರಿನ ಗದ್ದೆಗಳಂತಾಗಿವೆ. 20.07 ಮಿಮೀ ಮಳೆ:
ಸತತ ಮಳೆಯಿಂದ ಐತಿಹಾಸಿಕ ಉಣಕಲ್ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಉಣಕಲ್ ಗ್ರಾಮದ ನಿವಾಸಿಗಳ ವತಿಯಿಂದ ಜು. 21ರಂದು ಬೆಳಗ್ಗೆ 9ಕ್ಕೆ ಬಾಗಿನ ಅರ್ಪಣೆ , ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಮಹೇಶ ಟೆಂಗಿನಕಾಯಿ, ಮೇಯರ ರಾಮಣ್ಣ ಬಡಿಗೇರ, ಉಪಮೇಯರ ದುರ್ಗಮ್ಮ ಬಿಜವಾಡ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಿಗಿ, ಉಮೇಶಗೌಡ ಕೌಜಗೇರಿ, ಹಿರಿಯರಾದ ಚನ್ನು ಪಾಟೀಲ್ ಇತರರು ಭಾಗವಹಿಸಲಿದ್ದಾರೆ.ಬೆಣ್ಣಿಹಳ್ಳ-ತುಪರಿಹಳ್ಳಕ್ಕೆ ಒಳಹರಿವು ಹೆಚ್ಚಳ: