ಎರಡು ಅಕ್ರಮ ಪಿಸ್ತೂಲ್ ವಶ, ಆರೋಪಿ ಬಂಧನ

KannadaprabhaNewsNetwork |  
Published : Mar 04, 2025, 12:32 AM IST
ಎರಡು ಅಕ್ರಮ ಪಿಸ್ತೂಲ್ ವಶ-ಆರೋಪಿ ಬಂಧನ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಎರಡು ಅಕ್ರಮ ಪಿಸ್ತೂಲ್ ಸೇರಿದಂತೆ 4 ಸಜೀವ ಗುಂಡುಗಳು ವಶಪಡಿಸಿಕೊಂಡಿರುವ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಎಪಿಎಂಸಿ ಠಾಣೆಯ ಪೊಲೀಸರು ಖಚಿತ ಮಾಹಿತಿ ಆಧರಿಸಿ, ವಿಜಯಪುರ ನಗರದ ಇಂಡಿ ಬೈಪಾಸ್ ಹತ್ತಿರ, ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿ ಗ್ಯಾಂಗ್ ಬಾವಡಿಯ ಕುಂಬಾರಗಲ್ಲಿಯ ಉಮೇರ್ ಬಂದೇನವಾಜ್ ಗಿರಗಾಂವ (23) ಸೆರೆ ಸಿಕ್ಕಿದ್ದು, ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಎರಡು ಅಕ್ರಮ ಪಿಸ್ತೂಲ್ ಸೇರಿದಂತೆ 4 ಸಜೀವ ಗುಂಡುಗಳು ವಶಪಡಿಸಿಕೊಂಡಿರುವ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಎಪಿಎಂಸಿ ಠಾಣೆಯ ಪೊಲೀಸರು ಖಚಿತ ಮಾಹಿತಿ ಆಧರಿಸಿ, ವಿಜಯಪುರ ನಗರದ ಇಂಡಿ ಬೈಪಾಸ್ ಹತ್ತಿರ, ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿ ಗ್ಯಾಂಗ್ ಬಾವಡಿಯ ಕುಂಬಾರಗಲ್ಲಿಯ ಉಮೇರ್ ಬಂದೇನವಾಜ್ ಗಿರಗಾಂವ (23) ಸೆರೆ ಸಿಕ್ಕಿದ್ದು, ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಿದಾಗ, ಆರೋಪಿ ಅನಧಿಕೃತವಾಗಿ ಖರೀದಿಸಿ, ಮಾರಾಟ ಮಾಡುವ ಉದ್ದೇಶದಿಂದ ಇಟ್ಟುಕೊಂಡಿದ್ದ 2 ಕಂಟ್ರಿ ಪಿಸ್ತೂಲ್ ಗಳು ಹಾಗೂ 4 ಸಜೀವ ಗುಂಡುಗಳನ್ನು ಜಪ್ತ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣ ತನಿಖೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ