ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಯಾವುದೇ ಮಹಿಳೆಯರ ಸಾಧನೆ ಹಿಂದೆ ಪುರುಷನ ನೆರಳಿರುತ್ತದೆ. ಪುರುಷರ ಸಾಧನೆಗಳಿಗೆ ಮಹಿಳೆಯರ ಪಾತ್ರವೂ ಪ್ರಮುಖ ವಹಿಸಲಿದೆ. ಇಂದು ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಸರ್ಕಾರ ವಿವಿಧ ಯೋಜನೆಗಳನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕಿನತ್ತ ಮುನ್ನಡೆಯಬೇಕು ಎಂದರು.
ಅಖಿಲ ಕರ್ನಾಟಕ ಒಕ್ಕಲಿಗರ ಮಹಿಳಾ ಸಂಘದ ಜಿಲ್ಲಾಧ್ಯಕ್ಷೆ ಸುಜಾತ ಕೃಷ್ಣೇಗೌಡ ಮಾತನಾಡಿ, ಮಹಿಳೆಯರನ್ನು ಸಶಕ್ತರನ್ನಾಗಿ ಸಮಾಜದ ಮುಖ್ಯ ವಾಹಿನಿಗೆ ತರಲು ಮಹಿಳಾ ಸಂಘಟನೆಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ ಎಂದು ಶ್ಲಾಘಿಸಿದರು.ಭಾರತದಲ್ಲಿ ಮಹಿಳೆಯರಿಗೆ ಇರುವ ಗೌರವ, ಜಗತ್ತಿನ ಬೇರೆ ಯವುದೇ ದೇಶದಲ್ಲಿ ಇಲ್ಲ. ಆದರೂ ನಮ್ಮ ದೇಶದಲ್ಲಿ ಕೆಲ ದುಷ್ಕರ್ಮಿಗಳು ಮಹಿಳೆಯರ ಮೇಲೆ ನಡೆಸುವ ಕುಕೃತ್ಯಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡುತ್ತದೆ. ಎಲ್ಲರೂ ಇದನ್ನು ತಡೆಗಟ್ಟಲು ಶ್ರಮೀಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ನಾಟನಹಳ್ಳಿ ಗಂಗಾಧರ, ಅಖಿಲ ಕರ್ನಾಟಕ ಒಕ್ಕಲಿಗರ ಮಹಿಳಾ ತಾಲೂಕು ಅಧ್ಯಕ್ಷ ಪ್ರೇಮ ನಾಗರಾಜು, ಕರವೇ ಜಿಲ್ಲಾ ಅಧ್ಯಕ್ಷ ಡಿ.ಎಸ್ ವೇಣು, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್, ಅಪ್ಪು ಸೇವಾ ಟ್ರಸ್ಟ್ ಅಧ್ಯಕ್ಷ ಕಾಮನಹಳ್ಳಿ ಮಹೇಶ್, ಚಿಕ್ಕೋನಹಳ್ಳಿ ಚೇತನ್, ರೇಣುಕಾ ಚಂದ್ರು, ಶಿವಮ್ಮ, ನೇತ್ರಾವತಿ ಉಮೇಶ್, ವಿಮಲಾ, ಸುಧಾ, ಆಶಾ, ಶೃತಿ, ಮಾಣಿಕನಹಳ್ಳಿ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.