ಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. ೨೮ರಂದು ನಡೆದಿದೆ. ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಒ ರಾಮಸ್ವಾಮಿ ನಡುವೆ ಜಗಳ ನಡೆದಿದೆ. ಸತೀಶ ಅವರ ತಲೆಗೆ ಮದ್ಯದ ಬಾಟಲಿಯಿಂದ ರಾಮಸ್ವಾಮಿ ಹೊಡೆದಿದ್ದಾರೆ. ಸತೀಶ ಅವರಿಗೆ ಗಂಭೀರ ಏಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗಿದ್ದವರೂ ಜಗಳ ಬಿಡಿಸಿ ಇಬ್ಬರನ್ನೂ ಅಲ್ಲಿಂದ ಕಳುಹಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. ೨೮ರಂದು ನಡೆದಿದೆ.ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಒ ರಾಮಸ್ವಾಮಿ ನಡುವೆ ಜಗಳ ನಡೆದಿದೆ. ಸತೀಶ ಅವರ ತಲೆಗೆ ಮದ್ಯದ ಬಾಟಲಿಯಿಂದ ರಾಮಸ್ವಾಮಿ ಹೊಡೆದಿದ್ದಾರೆ.
ಸತೀಶ ಅವರಿಗೆ ಗಂಭೀರ ಏಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂ. ಶಿವರ ಗ್ರಾ.ಪಂ. ಸದಸ್ಯ ಗೋವಿನಕೆರೆ ಗ್ರಾಮದ ರಾಮು ಅವರ ಮನೆಗೆ ಗಣೇಶ ಹಬ್ಬದ ನಿಮಿತ್ತ ಊಟಕ್ಕೆಂದು ಸತೀಶ ಬಂದಿದ್ದರು. ರಾಮು, ರಘು ಅವರು ಮದ್ಯ ಸೇವನೆ ಮಾಡುತ್ತಾ ಕುಳಿತಿದ್ದಾಗ ಆಹ್ವಾನದ ಮೇರೆಗೆ ರಾಮಸ್ವಾಮಿ ಸಹ ಬಂದಿದ್ದರು. ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ವಿಚಾರವಾಗಿ ಅಧಿಕಾರಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ಮಾತನಾಡುತ್ತಿರಲಿಲ್ಲ. ಮದ್ಯ ಸೇವನೆ ಮಾಡುತ್ತಾ ಕುಳಿತಿದ್ದಾಗ ರಾಮು, ಶಿವರಾಜ್ ಅವರು ಜಗಳ ಬಿಟ್ಟು ಇಬ್ಬರು ಮಾತನಾಡಿಕೊಂಡಿರಿ ಎಂದು ಸಲಹೆ ನೀಡಿದ್ದಾರೆ. ಅದಕ್ಕೆ ಸತೀಶ್, ಅದರ ಬಗ್ಗೆ ಈಗ ಮಾತನಾಡುವುದು ಬೇಡ ಸುಮ್ಮನಿರಿ ಎಂದಿದ್ದಾರೆ. ಅಷ್ಟಕ್ಕೆ ಆಕ್ರೋಶಗೊಂಡ ರಾಮಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಎದುರಿಗೆ ಇದ್ದ ಗಾಜಿನ ಬಾಟಲಿಯಿಂದ ತಲೆಗೆ ಹೊಡೆದಿದ್ದಾರೆ. ಗಾಜಿನ ಚೂರು ಮುಖಕ್ಕೆ ಬಿದ್ದು ಏಟಾಗಿದೆ. ಜೊತೆಗಿದ್ದವರೂ ಜಗಳ ಬಿಡಿಸಿ ಇಬ್ಬರನ್ನೂ ಅಲ್ಲಿಂದ ಕಳುಹಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.