ಉಚ್ಚಿಲ ಮಹಾಲಕ್ಷ್ಮೀ ದೇವಳ ಶಾರದಾ ವಿಗ್ರಹ ರಚನೆ ಮುಹೂರ್ತ

KannadaprabhaNewsNetwork |  
Published : Aug 02, 2025, 12:15 AM IST
01ಶಾರದಾ | Kannada Prabha

ಸಾರಾಂಶ

ಉಡುಪಿ ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಶುಕ್ರವಾರ ಕ್ಷೇತ್ರದ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.

ಕಾಪು: ಇಲ್ಲಿನ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22 ರಿಂದ ಅ.2 ರ ವರೆಗೆ ಭಕ್ತಾಭಿಮಾಬಿಗಳ ಸಹಕಾರದಲ್ಲಿ ನಡೆಯಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಶುಕ್ರವಾರ ಕ್ಷೇತ್ರದ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರದ ಅಧ್ಯಕ್ಷ ಗಿರಿಧರ್ ಸುವರ್ಣ, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ವಿಗ್ರಹ ರಚನೆಗಾರರಾದ ಕುಬೇರ ಶಿವಮೊಗ್ಗ, ಎಂ.ಪಿ. ರಾಮ, ಲಾಲಾಜಿ ಕುಂದರ್, ಕ್ಷೇತ್ರದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್