ಉಡುಪಿ: ಹೈಪರ್‌ ಟೆನ್ಶನ್‌ನಿಂದ ಮೃತ ರೋಗಿಯಲ್ಲಿ ಕೋವಿಡ್ ದೃಢ

KannadaprabhaNewsNetwork |  
Published : Jun 04, 2025, 12:56 AM IST
32 | Kannada Prabha

ಸಾರಾಂಶ

ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್ ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮೇ 29 ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಕೋವಿಡ್ ಟೆಸ್ಟ್ ಮಾಡಿದಾಗ ಅವರಲ್ಲಿ ಕೊರೋನ ದೃಢಪಟ್ಟಿರುತ್ತದೆ. ಅವರು ಚಿಕಿತ್ಸೆಗೆ ಸ್ಪಂದಿಸದೇ ಜೂ 2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ.

ಕನ್ನಡಪ್ರಭ ವಾರ್ತೆ ಕಾಪು

ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ವ್ಯಕ್ತಿಯೊಬ್ಬರು ಹೈಪರ್ ಟೆನ್ಶನ್‌ನಿಂದ ಮೃತಪಟ್ಟಿದ್ದು, ಅವರಲ್ಲಿ ಕೋವಿಡ್ ಸೋಂಕು ಇದ್ದುದು ದೃಢಪಟ್ಟಿದೆ.ಪೀಟರ್ ಮಥಾಯಸ್ ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮೇ 29 ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಕೋವಿಡ್ ಟೆಸ್ಟ್ ಮಾಡಿದಾಗ ಅವರಲ್ಲಿ ಕೊರೋನ ದೃಢಪಟ್ಟಿರುತ್ತದೆ. ಅವರು ಚಿಕಿತ್ಸೆಗೆ ಸ್ಪಂದಿಸದೇ ಜೂ 2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ.ಈ ಬಗ್ಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾಹಿತಿ ನೀಡಿದ್ದು, ಪೀಟರ್ ಮಥಾಯಸ್ ಅವರಿಗೆ ಕೋವಿಡ್ ಇದ್ದುದು ದೃಢಪಟ್ಟಿದೆ. ಆದರೆ ಅವರು ಬೇರೆ ಉದ್ದೇಶಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದು ಈ ಸಾವನ್ನು ಕೋವಿಡ್ ಸಾವು ಎಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಅವರ ಮನೆಯವರಾರಿಗೂ ಕೋವಿಡ್ ಲಕ್ಷಣಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೃತರ ಮನೆಗೆ ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಿದ್ದು ಬುಧವಾರ ಅಂತ್ಯ ಸಂಸ್ಕಾರ ಏರ್ಪಡಿಸಲಾಗಿದ್ದು ಕೋವಿಡ್ ನಿಯಮಾವಳಿಗಳ ಪಾಲನೆಯೊಂದಿಗೆ ಅಂತ್ಯ ಸಂಸ್ಕಾರ ನಡೆಯುತ್ತಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.ತಹಸೀಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆರು ಬೆಳ್ಳೆ ಗ್ರಾಮಕ್ಕೆ ತೆರಳಿ ಜನರಿಗೆ ಕೊರೊನ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚನೆ ನೀಡಿರುತ್ತಾರೆ.ತಾಲೂಕು ವೈದ್ಯಾಧಿಕಾರಿ ವಾಸುದೇವ್, ಶಿರ್ವ ಮೆಡಿಕಲ್ ಆಫೀಸರ್ ಸುಬ್ರಹ್ಮಣ್ಯ, ವೈದ್ಯೆ ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ