ಉಡುಪಿ: ಆಟೋ ಗ್ಯಾಸ್ ದರ ಏರಿಕೆ ಖಂಡಿಸಿ ಎಸ್‌ಡಿಟಿಯು ಪ್ರತಿಭಟನೆ

KannadaprabhaNewsNetwork |  
Published : Mar 12, 2026, 01:45 AM IST
ಆಟೋ ಗ್ಯಾಸ್ ದರ ಏರಿಕೆಯ.ನ್ನು ವಿರೋಧಿಸಿ ಎಸ್‌ಡಿಟಿಯು ವತಿಯಿಂದ ಪ್ರತಿಭಟನೆ ನಡೆಯಿತು | Kannada Prabha

ಸಾರಾಂಶ

ಆಟೋ ರಿಕ್ಷಾಗಳಲ್ಲಿ ಬಳಸುವ ಗ್ಯಾಸ್ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ, ಈ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಧರಣಿ ನಡೆಸಲಾಯಿತು.

ಉಡುಪಿ: ಆಟೋ ರಿಕ್ಷಾಗಳಲ್ಲಿ ಬಳಸುವ ಗ್ಯಾಸ್ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ, ಈ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಧರಣಿ ನಡೆಸಲಾಯಿತು.ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಫರಂಗಿಪೇಟೆ, ಬಹುತೇಕ ಆಟೋ ಚಾಲಕರ ಮತ್ತವರ ಕುಟುಂಬ ಅವರ ದಿನನಿತ್ಯದ ಆದಾಯದ ಮೇಲೆ ಅವಲಂಬಿತರಾಗಿದ್ದು, ಆಟೋ ಗ್ಯಾಸ್ ದರ ಹೆಚ್ಚಳದಿಂದ ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ಬಿದ್ದಿದೆ, ಇಂಧನದ ದರ ಏರಿಕೆಯಿಂದ ಕುಟುಂಬ ನಿರ್ವಹಣೆ, ವಾಹನದ ಬಾಡಿಗೆ, ಬ್ಯಾಂಕ್ ಸಾಲ ಹಾಗೂ ವಾಹನ ನಿರ್ವಹಣೆ ಮುಂತಾದ ಖರ್ಚುಗಳನ್ನು ಭರಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಎಸ್‌ಡಿಟಿಯು ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಮಾತನಾಡಿ, ಸರ್ಕಾರವು ತಕ್ಷಣವೇ ಆಟೋ ಗ್ಯಾಸ್ ದರ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಆಟೋ ಚಾಲಕರಿಗೆ ಇಂಧನದ ಮೇಲೆ ವಿಶೇಷ ಸಬ್ಸಿಡಿ ನೀಡಬೇಕು ಜೊತೆಗೆ ಸಾರಿಗೆ ಕ್ಷೇತ್ರದ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಮಿತಿಯನ್ನು ರಚಿಸಿ ಚಾಲಕರ ಬದುಕು ಉಳಿಸುವಂತೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಟಿಯು ಕಾರ್ಯಕರ್ತರು ಹಾಗೂ ಆಟೋ ಚಾಲಕರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ರಾಜ್ಯ ನಾಯಕ ಶಾಹಿದ್, ಜಿಲ್ಲಾ ಉಪಾಧ್ಯಕ್ಷ ರಫೀಕ್ ಪೊಲಿಪು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನೀಫ್ ಕಂಡ್ಲೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಸ್ಮಾಯಿಲ್ ಉಸ್ತಾದ್ ಸ್ವಾಗತಿಸಿ ನಿರೂಪಿಸಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

14ರಂದು ದ.ಕ. ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌
ಎಲ್‌ಪಿಜಿ ಬೆಲೆ ಏರಿಕೆ: ಹೆದ್ದಾರಿ ಮಧ್ಯೆ ಚಹಾ ಮಾಡಿ ಕಾಂಗ್ರೆಸ್ ಪ್ರತಿಭಟನೆ