ಉಡುಪಿ: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಶುಭವಿದಾಯ

KannadaprabhaNewsNetwork |  
Published : May 01, 2024, 01:20 AM IST
ವಿದಾಯ30 | Kannada Prabha

ಸಾರಾಂಶ

. ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗು ಜಿಲ್ಲಾ ಎಸ್ಪಿ ಡಾ.ಅರುಣ್ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ವಕೀಲರ ಸಂಘ ವತಿಯಿಂದ ಜಿಲ್ಲಾ ನ್ಯಾಯಾಲಯದಿಂದ ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರಿಗೆ ನ್ಯಾಯಾಲಯದ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ವರ್ಗಾವಣೆಗೊಳ್ಳುತ್ತಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ್ ಶಿವಪ್ಪ ಮಾತನಾಡಿ, ನ್ಯಾಯಾಧೀಶರು ಮತ್ತು ವಕೀಲರು ಒಂದೇ ನಾಣ್ಯದ ಎರಡು ಮುಖಗಳು. ಉಡುಪಿಯಲ್ಲಿ ವಕೀಲರು ಮತ್ತು ನ್ಯಾಯಾಧೀಶರ ನಡುವೆ ಸಮನ್ವಯತೆ ಇದೆ. ಇಲ್ಲಿನ ವಕೀಲರು ಕೇವಲ ಜಿಲ್ಲೆಯಲ್ಲಿ ಕಾನೂನಿನ ಕೆಲಸದ ಜೊತೆಗೂ ಕಲಾತ್ಮಕವಾಗಿ ತೊಡಗಿಸಿಕೊಂಡಿದ್ದಾರೆ. ಸಂಗೀತ, ಯಕ್ಷಗಾನ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಪರಿಣಿತಿ ಹೊಂದಿದ್ದಾರೆ. ಇಲ್ಲಿ ಕೆಲಸ ಮಾಡಿರುವುದು ಸಂತಸ ನೀಡಿದೆ ಎಂದರು.

ವೇದಿಕೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್ ಹೆಗ್ಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸಿಜೆಎಮ್ ವಿಘ್ನೇಶ್, ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮನಾಥ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಪ್ರಧಾನ ಸಿವಿಲ್ ನ್ಯಾಯಧೀಶೆ ದೀಪಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮಪ್ರಕಾಶ್ ಉಪಸ್ಥಿತರಿದ್ದರು.

ಉಡುಪಿ ವಕೀಲರ ಸಂಘ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ನ್ಯಾಯವಾದಿ ರಮ್ಯಾ ಕಾಮತ್ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಶ್ ವಂದಿಸಿ, ಸಹನಾ ಕುಂದರ್ ನಿರೂಪಿಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್, ಹಿರಿಯ ವಕೀಲರಾದ ಆನಂದ್ ಮಡಿವಾಳ, ಎಚ್.ರಾಘವೇಂದ್ರ ಶೆಟ್ಟಿ ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರ ಬಗ್ಗೆ ಶುಭಶಂಸನೆಗೈದರು. ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಹಾಗು ಜಿಲ್ಲಾ ಎಸ್ಪಿ ಡಾ.ಅರುಣ್ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ