ಉಡುಪಿಗೆ ಸಾಂಸ್ಕೃತಿಕ ನಗರಿ ಖ್ಯಾತಿ: ಡಾ. ಉದಯಕುಮಾರ್ ಸರಳತ್ತಾಯ

KannadaprabhaNewsNetwork |  
Published : May 15, 2026, 02:45 AM IST
ಯಕ್ಷಗಾನ ಸಪ್ತಾಹವನ್ನು ಡಾ. ಉದಯಕುಮಾರ್ ಸರಳ್ತಾತಯರು ಉದ್ಘಾಟಿಸಿದರು | Kannada Prabha

ಸಾರಾಂಶ

ಇಲ್ಲಿನ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ಅಮೃತ ಮಹೋತ್ಸವದ ಪ್ರಯುಕ್ತ ಯಕ್ಷಗಾನ ಸಪ್ತಾಹವನ್ನು ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ: ಇಲ್ಲಿನ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ಅಮೃತ ಮಹೋತ್ಸವದ ಪ್ರಯುಕ್ತ ಯಕ್ಷಗಾನ ಸಪ್ತಾಹವನ್ನು ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.ಈ ಸಪ್ತಾಹವನ್ನು ಪರ್ಯಾಯ ಶ್ರೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉಡುಪಿಯು ಯಕ್ಷಗಾನ ಕಲೆಯ ತವರೂರಾಗಿದೆ. ಇಲ್ಲಿನ ಮಠಗಳ ಸಹಕಾರದಿಂದ ಸದಾಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ಸಾಂಸ್ಕೃತಿಕ ನಗರಿ ಎಂಬ ಖ್ಯಾತಿಗೆ ಉಡುಪಿ ಪಾತ್ರವಾಗಿದೆ. ಎಪ್ಪತ್ತೈದು ವರ್ಷ ಪೂರೈಸಿದ ಕಲಾಕ್ಷೇತ್ರವು ಮುಂದೆ ಶತಮಾನೋತ್ಸವದ ಸಂಭ್ರಮವನ್ನು ರಾಜಾಂಗಣದಲ್ಲಿಯೇ ಆಚರಿಸುವಂತಾಗಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದ್ಯಮಿ ಪ್ರಸಾದರಾಜ್ ಕಾಂಚನ್ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಲಾಕ್ಷೇತ್ರವು ಯಕ್ಷಗಾನ ಸಂಘಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.ಸಭಾಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ನಿಟ್ಟೂರು ಮಹಾಬಲ ಶೆಟ್ಟಿ ವಹಿಸಿದ್ದರು. ಅಧ್ಯಕ್ಷ ಕೇಶವಮೂರ್ತಿ ಬಿಲ್ಪತ್ರೆ ಪ್ರಸ್ತಾವನೆಗೈದರು, ವಿಷ್ಣುಮೂರ್ತಿ ಉಪಾಧ್ಯ ನಿರೂಪಿಸಿ, ಕಾರ್ಯದರ್ಶಿ ಗಣೇಶ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು. ಹಿರಿಯ ಸದಸ್ಯರಾದ ನಾಗರಾಜ ಉಪಾಧ್ಯ, ಡಾ. ರಮೇಶ್ ಬೆಂಬಾಳ್ಕರ್, ಕೋಶಾಧಿಕಾರಿ ನರಸಿಂಹ ಎನ್. ಆರ್ ಸಹಕರಿಸಿದರು. ನಂತರ ಯಕ್ಷಗಾನ ಪ್ರದರ್ಶನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಹಗಾರರ ಪ್ರೋತ್ಸಾಹಿಸಿ: ಹರಿಕೃಷ್ಣ ಪುನರೂರು
14ರೊಳಗೆ ಏತ ನೀರಾವರಿಗೆ ನೀರು ಹರಿಸಿ: ಎಸ್.ಕೆ. ಬೆಳ್ಳುಬ್ಬಿ