ಪರಂಪರೆ ತಿಳಿಸುವ ಯಕ್ಷಗಾನ ಕಲೆ: ಡಾ. ಪಿ. ಗಿರಿಧರ ಕಿಣಿ

KannadaprabhaNewsNetwork |  
Published : May 02, 2026, 03:00 AM IST
ಉಡುಪಿ ಯಕ್ಷಗಾನ ಕೇಂದ್ರದ ವತಿಯಿಂದ ಮಕ್ಕಳಿಗೆ ಯಕ್ಷಗಾನ ಶಿಬಿರ ನಡೆಯಿತು | Kannada Prabha

ಸಾರಾಂಶ

ಇಲ್ಲಿನ ಇಂದ್ರಾಳಿಯ ಯಕ್ಷಗಾನ ಕೇಂದ್ರ ವತಿಯಿಂದ ಮಕ್ಕಳಿಗಾಗಿ ಯಕ್ಷಗಾನ ಹೆಜ್ಜೆಗಾರಿಕೆ, ವೇಷಭೂಷಣ ಮತ್ತು ಬಣ್ಣಗಾರಿಕೆಯನ್ನೊಳಗೊಂಡ ಬೇಸಿಗೆ ಶಿಬಿರ ಸಮಾರೋಪ ನಡೆಯಿತು.

ಉಡುಪಿ: ಇಲ್ಲಿನ ಇಂದ್ರಾಳಿಯ ಯಕ್ಷಗಾನ ಕೇಂದ್ರ ವತಿಯಿಂದ ಮಕ್ಕಳಿಗಾಗಿ ಯಕ್ಷಗಾನ ಹೆಜ್ಜೆಗಾರಿಕೆ, ವೇಷಭೂಷಣ ಮತ್ತು ಬಣ್ಣಗಾರಿಕೆಯನ್ನೊಳಗೊಂಡ ಬೇಸಿಗೆ ಶಿಬಿರ ಸಮಾರೋಪ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ ಕಿಣಿ ಅವರು ಭಾಗವಹಿಸಿದ್ದರು. ಅವರು ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ವಿದ್ಯಾರ್ಥಿಗಳು ತಮ್ಮ ರಜಾ ಅವಧಿಯಲ್ಲಿ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಅಗತ್ಯತೆಯ ಬಗ್ಗೆ ತಿಳಿಸಿ, ಇದು ಅವರ ಶಾಲಾ ಕಲಿಕೆಯೊಂದಿಗೆ ನಮ್ಮ ಕಲೆ ಹಾಗೂ ಪರಂಪರೆಯ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಹಕಾರಿಯಾಗಿದೆ. ಇದರಿಂದ ಸಮಯದ ಸದುಪಯೋಗವಾಗುತ್ತದೆ’ ಎಂದರು.

ಸಭೆಯ ಅಧ್ಯಕ್ಷತೆಯನ್ನು ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ವಹಿಸಿದ್ದರು. ಸಭೆಯಲ್ಲಿ ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾದ ಪ್ರೊ. ಎಸ್. ವಿ. ಉದಯಕುಮಾರ್ ಶೆಟ್ಟಿ, ಮಂಜುನಾಥ ಮಯ್ಯ ಹಾಗೂ ಮೀನಾಲಕ್ಷಿಣಿ ಅಡ್ಯಂತಾಯ ಹಾಗೂ ಕೇಂದ್ರದ ಗುರುಗಳು ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿ ಧನ್ಯವಾದ ಸಮರ್ಪಿಸಿದರು.

ಬೇಸಿಗೆ ಶಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಶಿಬಿರಾರ್ಥಿಗಳು ಹಾಗೂ ಪೋಷಕರು ಶಿಬಿರದ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಹಸಿವಿದ್ದಾಗ ಒಕ್ಕಲುತನ ಪ್ರಗತಿ ಸಾಧ್ಯ
ಸಣ್ಣ ನೀರಾವರಿ ಯೋಜನೆ ದೇಶಕ್ಕೆ ಮಾದರಿ