ಉಡುಪಿ: ಇಲ್ಲಿನ ಇಂದ್ರಾಳಿಯ ಯಕ್ಷಗಾನ ಕೇಂದ್ರ ವತಿಯಿಂದ ಮಕ್ಕಳಿಗಾಗಿ ಯಕ್ಷಗಾನ ಹೆಜ್ಜೆಗಾರಿಕೆ, ವೇಷಭೂಷಣ ಮತ್ತು ಬಣ್ಣಗಾರಿಕೆಯನ್ನೊಳಗೊಂಡ ಬೇಸಿಗೆ ಶಿಬಿರ ಸಮಾರೋಪ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ ಕಿಣಿ ಅವರು ಭಾಗವಹಿಸಿದ್ದರು. ಅವರು ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ವಿದ್ಯಾರ್ಥಿಗಳು ತಮ್ಮ ರಜಾ ಅವಧಿಯಲ್ಲಿ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಅಗತ್ಯತೆಯ ಬಗ್ಗೆ ತಿಳಿಸಿ, ಇದು ಅವರ ಶಾಲಾ ಕಲಿಕೆಯೊಂದಿಗೆ ನಮ್ಮ ಕಲೆ ಹಾಗೂ ಪರಂಪರೆಯ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಹಕಾರಿಯಾಗಿದೆ. ಇದರಿಂದ ಸಮಯದ ಸದುಪಯೋಗವಾಗುತ್ತದೆ’ ಎಂದರು.
ಬೇಸಿಗೆ ಶಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಶಿಬಿರಾರ್ಥಿಗಳು ಹಾಗೂ ಪೋಷಕರು ಶಿಬಿರದ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.