ಈ ಮಂಡಲೋತ್ಸವದ ಅಂಗವಾಗಿ ಯೋಗೇಶ್ವರ ಶ್ರೀಕೃಷ್ಣನ ಮಠದಲ್ಲಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯು ಆ.3ರಂದು ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಅತ್ಯಂತ ವೈಶಿಷ್ಟ್ಯಪೂರ್ಣವಾದ ಉಡುಪಿಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವದ ವೈಭವವನ್ನು ವಿವಿಧ ಸ್ಪರ್ಧೆ, ಭಜನಾ ಕಮ್ಮಟ, ಧಾರ್ಮಿಕ ಪ್ರವಚನ, ವಿಚಾರ ಸಂಕಿರಣ ಮುಂತಾದ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ 48 ದಿನಗಳ ಕಾಲ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲು ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಶ್ರೀಕೃಷ್ಣ ಮಠದ ಆಡಳಿತ ಮಂಡಳಿಯು ನಿರ್ಧರಿಸಿದೆ.ಈ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೀತಾಮಂದಿರದಲ್ಲಿ ಬಿಡುಗಡೆಗೊಳಿಸಿದರು.ಈ ಸಂದರ್ಭ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ, ರಮೇಶ್ ಭಟ್, ಕೃಷ್ಣಪ್ರಸಾದ್, ರಮಣಾಚಾರ್ಯ ಮುಂತಾದವರು ಉಪಸ್ಥಿತರಿದ್ದರು.ಈ ಮಂಡಲೋತ್ಸವ ಸಮಿತಿಯು ಶಾಸಕ ಯಶ್ಪಾಲ್ ಸುವರ್ಣ ಗೌರವಾಧ್ಯಕ್ಷತೆಯಲ್ಲಿ ನಡೆಯಲಿದ್ದು, ಉತ್ಸವದ ಕಾರ್ಯಕ್ರಮಗಳನ್ನು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಜು.25ರಂದು ಉದ್ಘಾಟಿಸಲಿದ್ದಾರೆ.ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ:
ಈ ಮಂಡಲೋತ್ಸವದ ಅಂಗವಾಗಿ ಯೋಗೇಶ್ವರ ಶ್ರೀಕೃಷ್ಣನ ಮಠದಲ್ಲಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯು ಆ.3ರಂದು ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ. ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನೂ ಪರ್ಯಾಯ ಶ್ರೀ ಪಾದರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಉಡುಪಿ ಪತಂಜಲಿ ಜಿಲ್ಲಾ ಪ್ರಭಾರಿಗಳಾದ ಕೆ.ರಾಘವೇಂದ್ರ ಭಟ್, ಅನಂತರಾಯ ಶೆಣೈ, ಜಗದೀಶ ಕುಮಾರ್, ಲೀಲಾ ಆರ್. ಅಮೀನ್, ಸದಸ್ಯರಾದ ವಿಶ್ವನಾಥ್ ಭಟ್, ಶ್ಯಾಮಲಾ ಕೆ., ನಾಗರಾಜ ಶೇಟ್, ಶ್ರೀಪತಿ ಭಟ್, ಗಿರೀಶ ಉದ್ಯಾವರ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.