ಉಡುಪಿ: ಅಯೋಡಿನ್ ಕೊರತೆ ನಿಯಂತ್ರಣ ಸಪ್ತಾಹ ಆರಂಭ

KannadaprabhaNewsNetwork |  
Published : Oct 28, 2025, 12:36 AM IST
27ಆರೋಗ್ಯ ಅಯೋಡಿನ್ ಕೊರತೆಯ ನಿಯಂತ್ರಣ ಸಪ್ತಾಹದ ಕರಪತ್ರ ಬಿಡುಗಡೆ | Kannada Prabha

ಸಾರಾಂಶ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಪ್ರಯುಕ್ತ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹ ನೆರವೇರಿತು.

ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಪ್ರಯುಕ್ತ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹವನ್ನು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ ರಾವ್ ಕೆ. ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞೆ ಸುಮಾ ಹೆಗ್ಡೆ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳು ಹಾಗೂ ಅಯೋಡಿನ್ ಯುಕ್ತ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷೆ ತಾರಾ ಉಮೇಶ್ ಆಚಾರ್ಯ ಕರಪತ್ರ ಬಿಡುಗಡೆಗೊಳಿಸಿದರು.ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇದರ ಪಧಾಧಿಕಾರಿ ರವಿರಾಜ್ ನಾಯಕ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ತೆರೆಸಾ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ, ಶಾಲೆಯ ಸಂಚಾಲಕರು, ಪ್ರಾಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶಿಲ್ಪಶ್ರೀ ನಿರೂಪಿಸಿದರು. ಶಶಿಧರ್ ಎಚ್. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ