ಉಡುಪಿ: ತಾಲೂಕು ಕಚೇರಿಯಲ್ಲಿ ಲೀಗಲ್ ಕ್ಲಿನಿಕ್ ಉದ್ಘಾಟನೆ

KannadaprabhaNewsNetwork |  
Published : Mar 06, 2025, 12:31 AM IST
05ಲೀಗಲ್ | Kannada Prabha

ಸಾರಾಂಶ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ (ಲೀಗಲ್ ಕ್ಲಿನಿಕ್) ಇತ್ತೀಚೆಗೆ ಉದ್ಘಾಟನೆಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ (ಲೀಗಲ್ ಕ್ಲಿನಿಕ್) ಇತ್ತೀಚೆಗೆ ಉದ್ಘಾಟನೆಗೊಂಡಿತು.

ಹೈಕೋರ್ಟ್ ನ್ಯಾಯಧೀಶರೂ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯಾಧ್ಯಕ್ಷ ವಿ.ಕಾಮೇಶ್ವರ್ ರಾವ್, ಈ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿದರು.ಹೈಕೋರ್ಟ್ ನ್ಯಾಯಾಧೀಶ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಇ.ಎಸ್.ಇಂದಿರೇಶ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗಿಶ್, ವಕೀಲರ ಸಂಘ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಎಸ್ಪಿ ಡಾ.ಅರುಣ್ ಉಪಸ್ಥಿತರಿದ್ದರು.ಈ ಕಚೇರಿಯಲ್ಲಿ ಉಚಿತ ಕಾನೂನು ಸಲಹೆ ಹಾಗೂ ನೆರವನ್ನು ನೀಡಲಾಗುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಓರ್ವ ವಕೀಲರು ಲಭ್ಯರಿರುತ್ತಾರೆ. ವಾರದ ಸೋಮವಾರ ಹಾಗೂ ಶುಕ್ರವಾರ ಮಧ್ಯಾಹ್ನ 2 ರಿಂದ 6ರ ವರೆಗೆ ತೆರೆದಿರುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ