ಉಡುಪಿ: ಲೈಟ್ ಹೌಸ್ ಚಲನಚಿತ್ರ ತಂಡದಿಂದ ನೇತ್ರದಾನ ವಾಗ್ದಾನ

KannadaprabhaNewsNetwork |  
Published : May 13, 2025, 11:59 PM IST
13ನೇತ್ರ | Kannada Prabha

ಸಾರಾಂಶ

ಲೈಟ್ ಹೌಸ್ ಎಂಬ ಕನ್ನಡ ಚಲನಚಿತ್ರ ತಂಡದ ವತಿಯಿಂದ ನಗರದ ಪ್ರಸಾದ್ ನೇತ್ರಾಲಯದಲ್ಲಿ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಲೈಟ್ ಹೌಸ್ ಎಂಬ ಕನ್ನಡ ಚಲನಚಿತ್ರ ತಂಡದ ವತಿಯಿಂದ ನಗರದ ಪ್ರಸಾದ್ ನೇತ್ರಾಲಯದಲ್ಲಿ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಭಾರತದಲ್ಲಿ ನೇತ್ರದಾನದ ಬಗ್ಗೆ ಹೆಚ್ಚಿನ ಅರಿವು ಇಲ್ಲ. ಇದರಿಂದ ದೃಷ್ಟಿಹೀನರಿಗೆ ಶ್ರೀಲಂಕಾ ಮತ್ತಿತರ ದೇಶಗಳಿಂದ ಕಣ್ಣಿನ ಕರಿಗುಡ್ಡೆಯನ್ನು ಆಮದು ಮಾಡಿ ರೋಗಿಗಳಿಗೆ ಜೋಡಿಸಲಾಗುತ್ತಿದೆ. ಅಲ್ಲಿ ಬೌದ್ಧ ಧರ್ಮದಲ್ಲಿ ನೇತ್ರದಾನಕ್ಕೆ ವಿಶೇಷವಾದ ಆದ್ಯತೆ ಇರುವ ಕಾರಣ ಅವರು ಹೆಚ್ಚಿನ ಸಂಖ್ಯೆಯಲ್ಲಿ ನೇತ್ರದಾನ ಮಾಡಲು ಮುಂದೆ ಬರುತ್ತಿದ್ದಾರೆ. ಒಂದು ಕರಿಗುಡ್ಡೆಯಿಂದ ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಲೈಟ್ ಹೌಸ್ ಚಲನಚಿತ್ರ ತಂಡದ ಕಾರ್ಯ ಅಭಿನಂದನೀಯ. ನೇತ್ರದಾನದ ಬಗ್ಗೆ ಇರುವ ಅಪನಂಬಿಕೆಯನ್ನು ದೂರ ಮಾಡಲು ಈ ರೀತಿಯ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಕಾರ್ಕಳ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರನಾಥ ಎಂ.ವಿ. ಮಾತನಾಡಿ, ದೃಷ್ಟಿ ಕಳೆದುಕೊಂಡವರು ಪ್ರಪಂಚವನ್ನು ನೋಡಲು ಅಸಾಧ್ಯ. ಈ ನಿಟ್ಟಿನಲ್ಲಿ ನೇತ್ರದಾನದ ಅರಿವು ಮೂಡಿಸುವ ಕಾರ್ಯಕ್ರಮ ಎಲ್ಲ ಕಡೆಯಲ್ಲಿ ನಡೆಯಬೇಕು ಎಂದು ಶುಭ ಹಾರೈಸಿದರು.ಸಾಮಾಜಿಕ ಕಾರ್ಯಕರ್ತ ಲೇಖಕ ರಾಘವೇಂದ್ರ ಪ್ರಭು ಕರ್ವಾಲು ಮಾತನಾಡಿ, ನಾವು ಕಣ್ಣು ಮುಚ್ಚಿದಾಗ ಮತ್ತೊಬ್ಬರು ಕಣ್ಣು ತೆರೆಯಬೇಕು. ಈ ನಿಟ್ಟಿನಲ್ಲಿ ನೇತ್ರದಾನ ಮತ್ತು ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ಇರುವ ಮೂಢನಂಬಿಕೆ ದೂರ ಮಾಡಲು ನೇತ್ರದಾನ ವಾಗ್ದಾನ ಶಿಬಿರಗಳು ಪ್ರತಿಯೊಂದು ಗ್ರಾಮದಲ್ಲಿ ನಡೆಯಬೇಕು. ದೃಷ್ಟಿ ಕಳೆದುಕೊಂಡವರು ಸಮಾಜದಲ್ಲಿ ಯಾವ ರೀತಿಯ ಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂಬ ಕಥೆಯನ್ನು ಹೊಂದಿರುವ ಲೈಟ್ ಹೌಸ್ ಚಲನಚಿತ್ರ ತಂಡದ ಈ ಕಾರ್ಯ ಶ್ಲಾಘನೀಯ ಎಂದರು.ಆಸ್ಪತ್ರೆಯ ವೈದ್ಯರಾದ ಡಾ. ಶಮಂತ್ ಶೆಟ್ಟಿ, ಡಾ. ಸ್ನೇಹ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು.

ಲೈಟ್ ಹೌಸ್ ಚಲನಚಿತ್ರದ ನಿರ್ಮಾಪಕ ದತ್ತಾತ್ರೇಯ ಪಾಟ್ಕಾರ್ ಸಿನಿಮಾದ ಬಗ್ಗೆ ಮಾತನಾಡಿದರು. ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಸ್ವಾಗತ ಮತ್ತು ಪ್ರಸ್ತಾವನೆಗೈದರು. ರಂಗಭೂಮಿ ಕಲಾವಿದ ರಾಮಾಂಜಿ ನಮ್ಮ ಭೂಮಿ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ