ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಅಲ್ಜೈಮರ್ಸ್ ದಿನಾಚರಣೆ

KannadaprabhaNewsNetwork |  
Published : Sep 23, 2024, 01:28 AM IST
ಅಶೋಕ್21 | Kannada Prabha

ಸಾರಾಂಶ

ವಿಶ್ವ ಅಲ್ಜೈಮರ್ಸ್ ದಿನಾಚರಣೆಯ ಅಂಗವಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ (ಕೆಎಬಿಎಫ್ಐ) ಜಂಟಿ ಆಶ್ರಯದಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ವಿಶ್ವ ಅಲ್ಜೈಮರ್ಸ್ ದಿನಾಚರಣೆಯ ಅಂಗವಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ (ಕೆಎಬಿಎಫ್ಐ) ಜಂಟಿ ಆಶ್ರಯದಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ನಡೆಯಿತು.ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಅಶೋಕ್ ಎಚ್. ಕಾರ್ಯಕ್ರಮ ಉದ್ಘಾಟಿಸಿ ಅಲ್ಜೈಮರ್ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಹಾಗೂ ಮನೋರೋಗ ತಜ್ಞರಾದ ಡಾ.ವಾಸುದೇವ್, ಸಾರ್ವಜನಿಕರಿಗೆ ಮರೆವಿನ ಕಾಯಿಲೆಯ ಲಕ್ಷಣ ಮತ್ತು ಚಿಕಿತ್ಸಾಕ್ರಮಗಳ ಕುರಿತ ಮಾಹಿತಿ ನೀಡಿ, ಅಲ್ಜೈಮರ್ಸ್ ಕಾಯಿಲೆಯನ್ನು ಆರಂಬಿಕ ಹಂತದಲ್ಲಿ ಪತ್ತೆ ಹಚ್ಚಿ ತತ್‌ಕ್ಷಣದ ಚಿಕಿತ್ಸೆ ನೀಡುವ ಮೂಲಕ ನಿಯಂತ್ರಣದಲ್ಲಿಡುವುದು ಅತೀ ಅನಿವಾರ್ಯವಾಗಿದ್ದು, ಈ ಬಗ್ಗೆ ಪ್ರತಿಯೊಬ್ಬರೂ ಹಿರಿಯನಾಗರಿಕರ ಬಗ್ಗೆ ಕಾಳಜಿವಹಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠ ರೋಗ ನಿವಾರಣಾ ಅಧಿಕಾರಿ ಡಾ.ಲತಾ ನಾಯಕ್ ಉಪಸ್ಥಿತರಿದ್ದರು.‌ ಕಾರ್ಯಕ್ರಮವನ್ನು ಸೈಕಾಲಿಜಿಸ್ಟ್ ಅಬ್ದುಲ್ ಸಮದ್ ಸ್ವಾಗತಿಸಿದರು, ಮೆದುಳಿನ ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಅನುಷ ವಂದಿಸಿದ ಕಾರ್ಯಕ್ರಮದಲ್ಲಿ ಶುಷ್ರುಶಕ ರಾಮ್ ಕುಮಾರ್ ಮತ್ತು ಫಿಸಿಯೋತೆರಪಿಸ್ಟ್ ನೇಹಾ ಪ್ರೀಮಲ್ ಉಪಸ್ಥಿತರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!