ರಸ್ತೆಯ ಮೇಲೆ ಹರಿಯುತ್ತಿದೆ ಯುಜಿಡಿ ನೀರು

KannadaprabhaNewsNetwork |  
Published : Jul 04, 2025, 11:53 PM IST
ಸಿಕೆಬಿ-1 ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗದ ಬಿಬಿ ರಸ್ತೆಯ ಮೇಲೆ ಹರಿಯುತ್ತಿರುವ ಯುಜಿಡಿಯ ಕೊಳಚೆ ನೀರು | Kannada Prabha

ಸಾರಾಂಶ

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ನಗರದ ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಬಿಬಿ ರಸ್ತೆಯಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ಮ್ಯಾನ್‌ಹೋಲ್‌ ಉಕ್ಕಿ ರಸ್ತೆ ಮೇಲೆ ಹರಿಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಇದರಿಂದ ಬಸ್ ನಿಲ್ದಾಣಕ್ಕೆ, ಗಾಂಧಿಭವನ, ಚರ್ಚ್, ಲೈಬ್ರೇರಿ, ವಾಪಸಂದ್ರ ಬಡಾವಣೆ, ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ತೆರಳಲು ಸಾರ್ವಜನಿಕರು ಪರದಾಡುತ್ತಿದ್ದಾರೆ ಹಾಗೂ ಸುತ್ತಮುತ್ತ ವಾಸಿಸುವ ಜನರು ಕಲುಷಿತ ನೀರಿನ ದುರ್ವಾಸನೆಯಿಂದ ಬೇಸತ್ತಿದ್ದು, ಅಂಗಡಿ ಮಳಿಗೆಗಳಲ್ಲಿ ಮತ್ತು ಮನೆಗಳಲ್ಲಿ ಇರಲಾಗದ ಪರಿಸ್ಥಿತಿ ಇದೆ.

ನಗರಸಭೆಗೆ ಮನವಿ ಸಲ್ಲಿಕೆ

ಕೆಲವು ದಿನದ ಹಿಂದೆ ಈ ಬಗ್ಗೆ ನಗರ ಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್‌ಗೆ ಸಕ್ಕೀಂಗ್ ಮಿಷನ್ ಹಾಕಿ ನೀರು ಹರಿಯಿತೆಂದು ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ. ಇದರ ದುರ್ವಾಸನೆ ತಾಳಲು ಆಗದು ಎಂದು ಸ್ಥಳೀಯ ನಿವಾಸಿಗಳು, ಬಸ್ ನಿಲ್ದಾಣಕ್ಕೆ ಬರುವ ಮತ್ತು ಹೋಗುವ ಸಾರ್ವಜನಿಕರು, ಬದಿಯಲ್ಲಿಯೇ ಇರುವ ಟ್ಯಾಕ್ಸಿ ಸ್ಟ್ಯಾಂಡ್ ಚಾಲಕರು, ಆಸ್ಪತ್ರೆಗೆ ಬರುವ ರೋಗಿಗಳು ತಿಳಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಹ ಮನವಿ ಮಾಡಿದ್ದಾರೆ.

ಅವೈಜ್ಞಾನಿಕ ಚರಂಡಿ ನಿರ್ಮಾಣ

ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ. ಅಲ್ಲಿಯೇ ನಿಂತು ಬ್ಲಾಕ್ ಆಗಿ ರಸ್ತೆ ಮೇಲೆ ಹರಿದು, ವಾಪಸಂದ್ರ ಬಡಾವಣೆಯಲ್ಲಿ ಸುಮಾರು ಐದಾರು ನೂರು ಮೀಟರ್ಯು ರಸ್ತೆಯ ಮೇಲೆ ಹರಿಯುತ್ತಿದ್ದು, ಸ್ಥಳಿಯ ಜನರು ತೊಂದರೆ ಅನುಭವಿಸುವಂತಾಗಿದೆ.

ಜಿಲ್ಲಾಕೇಂದ್ರ ಅಭಿವೃದ್ಧಿ ಹೊಂದುತ್ತಿರುವುದರ ನಡುವೆ ಹಲವು ವರ್ಷಗಳಿಂದ ಬಾಧಿಸುತ್ತಿರುವ ಯುಜಿಡಿ ಕಿರಿಕಿರಿ ಮಾತ್ರ ತಪ್ಪಿಲ್ಲ. ನಗರದ ಬಹುತೇಕ ಕಡೆ ಯುಜಿಡಿ ಬ್ಲಾಕ್ ಆಗಿರುತ್ತದೆ. ದಿನಗಟ್ಟಲೇ ನೀರು ಹರಿದು ಹೋಗುತ್ತಿರುತ್ತದೆ.ಸಕ್ಕಿಂಗ್‌ ಯಂತ್ರ ಬಳಕೆ

ಇದನ್ನು ಅನಿವಾರ್ಯವಾಗಿ ತುಳಿದುಕೊಂಡು ಹೋಗುವಂತಾಗಿದೆ. ಪದೇ ಪದೆ ಒಳಚರಂಡಿಯಲ್ಲಿ ನೀರು ನಿಲ್ಲುತ್ತಿದ್ದರೂ ಮಾತ್ರ ತಾತ್ಕಾಲಿಕ ಪರಿಹಾರ ಕೈಗೊಳ್ಳುತ್ತಿದ್ದು, ಆಗಾಗ ಸಕ್ಕಿಂಗ್ ಯಂತ್ರವನ್ನು ತಂದು ನೀರು ಖಾಲಿ ಮಾಡಲಾಗುತ್ತದೆ. ಆದರೆ, ಕೆಲವೇ ದಿನಗಳಲ್ಲಿ ಸಮಸ್ಯೆ ಪುನಃ ಕಂಡು ಬರುತ್ತದೆ. ಇದಕ್ಕೆ ಅಲ್ಲಲ್ಲಿ ಅವೈಜ್ಞಾನಿಕ ಒಳಚರಂಡಿಯ ನಿರ್ಮಾಣ, ಕಳಪೆ ಕಾಮಗಾರಿ, ಪೈಪು ಒಡೆದಿರುವುದು ಸೇರಿ ನಾನಾ ಕಾರಣಗಳು. ಕಾಮಗಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು, ಜನರು ಸಮಸ್ಯೆ ಅನುಭವಿಸುವಂತಾಗಿದೆ.

ಅವೈಜ್ಞಾನಿಕ ಚರಂಡಿಗಳು

ಮತ್ತೊಂದೆಡೆ ಕೋಟ್ಯಂತರ ಅನುದಾನವನ್ನು ನುಂಗಿರುವ ಯುಜಿಡಿಗೆ ವಾಡಿರ್ನಲ್ಲಿನ ಚರಂಡಿಗಳ ಸಂಪರ್ಕ ಕಲ್ಪಿಸಿರುವುದು ಅವೈಜ್ಞಾನಿಕತೆಗೆ ನಿಖರ ನಿದರ್ಶನ. ಮಲ ಮೂತ್ರ, ಶೌಚಗೃಹ ನೀರು ಚರಂಡಿಯ ನೀರಿನಲ್ಲಿ ಮಿಶ್ರಣಗೊಳ್ಳುತ್ತಿವೆ. ಮಳೆಯ ನೀರು ಮಿಶ್ರಣವಾಗಿ, ಮಳೆ ಕೊಯ್ಲು ಎಂಬುದಕ್ಕೆ ಅರ್ಥವಿಲ್ಲದಂತಾಗಿದೆ.ಗ್ರಾಮಾಂತರದಿಂದ ಅವಶ್ಯ ವಸ್ತುಗಳ ಖರೀದಿ, ಕಚೇರಿಗಳ ಕೆಲಸಕ್ಕೆ, ನೆಂಟರ ಮತ್ತು ಸ್ನೇಹಿತರ ಮನೆಗಳಿಗೆ, ದೇವಸ್ಥಾನ ಗಳಿಗೆ ಹಾಗೂ ರೋಗಿಗಳು ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ಬರುತ್ತಾರೆ. ಆದರೆ ಆಸ್ಪತ್ರೆಗೆ ಬರುವ ದಾರಿಯಲ್ಲಿ ಯುಜಿಡಿಯ ಕೊಳಚೆ ನೀರಿನಲ್ಲಿ ಬಂದು ಕಾಯಿಲೆ ವಾಸಿ ಮಾಡಿಕೊಂಡು ಮತ್ತೆ ಮನೆಗೆ ಹೋಗುವಾಗ ಅದೇ ಯುಜಿಡಿಯ ಕೊಳಚೆ ನೀರಿನಲ್ಲಿ ವಾಪಸ್‌ ಹೋಗುವಾಗ ಮತ್ತೆ ಕಾಯಿಲೆಗಳನ್ನು ಹೊತ್ತು ಮನೆ ಸೇರದೆ ಮತ್ತೆ ಆಸ್ಪತ್ರೆಗೆ ಬರುವಂತಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ