ಸ್ಪೀಕ್‌ ಫಾರ್ ಇಂಡಿಯಾ 7ನೇ ಕರ್ನಾಟಕ ಆವೃತ್ತಿ ಅಂತಿಮ ಸುತ್ತಿನಲ್ಲಿ ಎಸ್‌ಡಿಎಂ ಶಾಮಪ್ರಸಾದ್‌ಗೆ ಅಗ್ರಸ್ಥಾನ

KannadaprabhaNewsNetwork |  
Published : Feb 28, 2024, 02:34 AM IST
ಅಗ್ರಸ್ಥಾನ | Kannada Prabha

ಸಾರಾಂಶ

ಅಂತಿಮ ಸ್ಪರ್ಧೆಯ ತೀರ್ಪುಗಾರರಾಗಿ ನಾಡೋಜ ಡಾ. ಬಿ.ಟಿ. ರುದ್ರೇಶ್ ಮತ್ತು ಹಿರಿಯ ಪತ್ರಕರ್ತೆ ಮಾಯಾ ಶರ್ಮಾ, ವೈದ್ಯೆ ಡಾ. ಸಿಲ್ವಿಯಾ ಕರ್ಪಗಮ್ ಭಾಗಿಯಾಗಿದ್ದರು. ಅಂತಿಮ ಸುತ್ತಿನಲ್ಲಿ ವಿಜೇತರಾದ ಎಚ್.ಪಿ. ಶಾಮ ಪ್ರಸಾದ್ ಅವರನ್ನು 2.5 ಲಕ್ಷ ರು. ನಗದು ನೀಡಿ ಗೌರವಿಸಲಾಯಿತು

ಬೆಳ್ತಂಗಡಿ: ಬೆಂಗಳೂರಿನ ದಯಾನಂದ ಸಾಗರ್ ವಿಶ್ವವಿದ್ಯಾನಿಲಯದಲ್ಲಿ ಫೆ.16ರಂದು ಆಯೋಜಿಸಿದ್ದ ‘ಸ್ಪೀಕ್ ಫಾರ್ ಇಂಡಿಯಾ 2023- 24’ರ ಸಾಲಿನ 7ನೇ ಕರ್ನಾಟಕ ಆವೃತ್ತಿಯ ಅಂತಿಮ ಹಂತದ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಎಚ್.ಪಿ. ಶಾಮ ಪ್ರಸಾದ್ ಅಗ್ರಸ್ಥಾನದ ಮನ್ನಣೆಯೊಂದಿಗೆ ಜಯ ಗಳಿಸಿದ್ದಾರೆ.

ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ವಾಕ್ಪಟುತ್ವವನ್ನು ಪ್ರದರ್ಶಿಸಿದ ಎಚ್.ಪಿ. ಶಾಮ ಪ್ರಸಾದ್ ವಿಜಯ ಸಾಧಿಸಿದ್ದಾರೆ.

ಪ್ರಸಕ್ತ ವರ್ಷದ ಸ್ಪರ್ಧೆಗೆ 18,000 ವಿದ್ಯಾರ್ಥಿಗಳು ನೋಂದಣಿಯಾಗಿ 6,300 ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. 45 ಸ್ಪರ್ಧಿಗಳ ಪೈಕಿ 8 ಸ್ಪರ್ಧಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಇವರಲ್ಲಿ ಎಸ್‌ಡಿಎಂ ಕಾಲೇಜಿನ ಎಚ್.ಪಿ. ಶಾಮ ಪ್ರಸಾದ್ ಆಯ್ಕೆಯಾಗಿದ್ದರು.

ಅಂತಿಮ ಸುತ್ತಿನಲ್ಲಿ ಕಾಲೇಜುಗಳಲ್ಲಿ ಸೇವಾ ಶಿಕ್ಷಣದ ಅವಶ್ಯಕತೆ, ಕೃತಕ ಬುದ್ಧಿಮತ್ತೆಯ ನಿಯಂತ್ರಣ ಹಾಗೂ ಹವಾಮಾನ ವೈಪರೀತ್ಯದ ಕುರಿತು ವ್ಯಾಪಕ ಚರ್ಚೆ ನಡೆಯಿತು. 3ನೇ ಬಾರಿಗೆ ಸ್ಪೀಕ್ ಫಾರ್ ಇಂಡಿಯಾ ಸ್ಪರ್ಧೆಯಲ್ಲಿ ಇವರು ಭಾಗವಹಿಸಿದ್ದು, ಈ ಬಾರಿ ಗೆಲುವು ಸಾಧಿಸಿದ್ದಾರೆ.

ಅಂತಿಮ ಸ್ಪರ್ಧೆಯ ತೀರ್ಪುಗಾರರಾಗಿ ನಾಡೋಜ ಡಾ. ಬಿ.ಟಿ. ರುದ್ರೇಶ್ ಮತ್ತು ಹಿರಿಯ ಪತ್ರಕರ್ತೆ ಮಾಯಾ ಶರ್ಮಾ, ವೈದ್ಯೆ ಡಾ. ಸಿಲ್ವಿಯಾ ಕರ್ಪಗಮ್ ಭಾಗಿಯಾಗಿದ್ದರು. ಅಂತಿಮ ಸುತ್ತಿನಲ್ಲಿ ವಿಜೇತರಾದ ಎಚ್.ಪಿ. ಶಾಮ ಪ್ರಸಾದ್ ಅವರನ್ನು 2.5 ಲಕ್ಷ ರು. ನಗದು ನೀಡಿ ಗೌರವಿಸಲಾಯಿತು.

ಮೂಲತಃ ಮೈಸೂರು ಜಿಲ್ಲೆಯ ಹುಣಸೂರು ತಾಲುಕಿನ ಹನಗೋಡಿನವರಾದ ಎಚ್.ಪಿ. ಶಾಮ ಪ್ರಸಾದ್ 8ನೇ ತರಗತಿಯಿಂದ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸಕೋಟೆಯಲ್ಲಿ ಜಾತ್ಯತೀತ ಸಿದ್ದಾಂತಗಳಿಗೆ ಮನ್ನಣೆ
ಪೌರಾಣಿಕ ಕಥೆಗಳು ಮನುಷ್ಯನಿಗೆ ನೈತಿಕ ದಾರಿದೀವಿಗೆ: ಶಿಕ್ಷಕಿ ಗಿರಿಜಾ ವಾಸುದೇವ್