ಕನ್ನಡಪ್ರಭ ವಾರ್ತೆ ಜಮಖಂಡಿ
ನೀರಾವರಿಯಿಂದ ಜನರ ಬದುಕು ಹಸನಾಗಲಿದೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಬಡ ಕುಟುಂಬಗಳಿಗೆ ತಿಂಗಳಿಗೆ ₹5 ಸಾವಿರ ಮುಟ್ಟುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
ಬೀಳಗಿ ಶಾಸಕ ಜೆ.ಟ.ಪಾಟೀಲ ಮಾತನಾಡಿ, ಬರಗಾಲ ಪ್ರದೇಶವಾಗಿದ್ದ ಜಮಖಂಡಿ ಕ್ಷೇತ್ರದ ಕೊನೆಯ ಭಾಗದ ಹಳ್ಳಿಗಳಿಗೆ ಅನುಕೂಲವಾಗುವ ತುಬಚಿ ಏತನೀರಾವರಿ ಯೋಜನೆ ಜಾರಿಗೆ ತರಬೇಕು. ಸಾವಳಗಿ ತುಂಗಳ ಏತ ನೀರಾವರಿಯ ನೀರು ತಾಲೂಕಿನ ಕೊನೆಯ ಭಾಗದ ಹಳ್ಳಿಗೆಳಿಗೆ ತಲುಪುತ್ತಿಲ್ಲ. ಅಥಣಿ ಭಾಗದಿಂದ ಬರುವ ನೀರು ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ವಿವರಿಸಿದರು. ಸರ್ಕಾರ ಯುಕೆಪಿ ಮೂರನೇ ಹಂತದ ಯೋಜನೆಯನ್ನು ಜಾರಿಗೊಳಿಸಲು ಒಪ್ಪಿದೆ ಮೂರು ವರ್ಷಗಳ ಆವಧಿಯಲ್ಲಿ ಪರಿಹಾರ ವಿತರಿಸುವ ಕೆಲಸವಾಗಲಿದೆ ಎಂದು ಹೇಳಿದರು.ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಆನಂದ ನ್ಯಾಮಗೌಡ ಮಾತನಾಡಿದರು. ವೇಮನ ವಿವಿಯ ಸಂಯೋಜಕ ಎಚ್.ಬಿ. ನಿಲಗುಂದ, ಪ್ರಾಚಾರ್ಯ ಟಿ.ಪಿ.ಗಿರಡ್ಡಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕೊಕಟನೂರಿನ ಗುರುಶಾಂತಲಿಂಗ ಸ್ವಾಮಿಗಳು, ಸಿದ್ಧಲಿಂಗ ಆಶ್ರಮದ ಅನುಸೂಯಾತಾಯಿ, ಈಶ್ವರೀಯ ವಿವಿಯ ವೈಷ್ಣವೀ ಅಕ್ಕ, ದೇವಸ್ಥಾನದ ಅರ್ಚಕ ಶಂಕರ ಕುಲಕರ್ಣಿ, ಏಗಪ್ಪಸವದಿ, ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಹುಲ್ ಕಲೂತಿ ನಿರ್ದೇಶಕ ಅರುಣಕುಮಾರ ಶಾ, ವರ್ಧಮಾನ ನ್ಯಾಮಗೌಡ, ಫಕ್ಕೀರಸಾಬ ಬಾಗವಾನ, ಶ್ರೀಶೈಲ ದಳವಾಯಿ, ಅರ್ಜುನ ದಳವಾಯಿ, ಮುತ್ತಣ್ಣ ಹಿಪ್ಪರಗಿ, ಸುಶೀಲ ಕುಮಾರ ಬೆಳಗಲಿ, ವಕೀಲ ಎಲ್.ಆರ್. ಉದಪುಡಿ, ತುಕಾರಾಮ ಹಾಜುವಳ್ಳಗೋಳ, ಕಲ್ಲಪ್ಪ ಗಿರಡ್ಡಿ, ವಿಜಯಲಕ್ಷ್ಮೀ ಹೊಸೂರು ಪಿಡಿಓ ಅಶೋಕ ಜನಗೌಡ ವೇದಿಕೆಯಲ್ಲಿದ್ದರು. ಬಸವಂತಣ್ಣ ಕನಾಳ ಸ್ವಾಗತಿಸಿದರು.
ಸಚಿವ ಎಚ್.ಕೆ. ಪಾಟೀಲರು ತುಂಗಳ ಗ್ರಾಮದ ಬೀಗರು. ಅವರು ಶ್ರಮಪಟ್ಟು ಸಾವಳಗಿ-ತುಂಗಳ ಏತ ನೀರಾವರಿ ಯೊಜನೆ ಜಾರಿಗೆ ತರುವ ಮೂಲಕ ನೀರು ತಂದು ಕೊಟ್ಟಿದ್ದಾರೆ, ಇಂತಹ ಬೀಗರಿದ್ದರೆ ನಮ್ಮೆಲ್ಲ ಸಮಸ್ಯೆಗಳು ಪರಿಹಾರ ವಾಗುತ್ತವೆ ಎಂದು ಸಭೆಯ ಗಮನ ಸೆಳೆದ ಅವರು, ಸಾವಳಗಿ ತುಂಗಳ ಏತ ನೀರಾವರಿ ಯೋಜನೆಯ ನಿರ್ವಹಣೆಗೆ ಪ್ರಯತ್ನಿಸಲಾಗುವುದು. ಸರ್ಕಾರದ ಯೋಜನೆಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.