ಉಮೇಶ ಜಾಧವ್‌ ಗೆಲುವಿಗೆ ಬದ್ಧ: ದೊಡ್ಡಪ್ಪಗೌಡ

KannadaprabhaNewsNetwork |  
Published : Apr 22, 2024, 02:01 AM ISTUpdated : Apr 22, 2024, 02:02 AM IST
ಜೇವರ್ಗಿ : ಪಟ್ಟಣದ ಹೊರವಲಯದ ಬಸವೇಶ್ವರ ಸ್ಟೋನ್ ಕ್ರಷರ್ ಆವರಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸ್ವಾಭೀಮಾನಿ ಕರ‍್ಯಕರ್ತರ ಸಮಾವೇಶದಲ್ಲಿ ಕೈ ಎತ್ತುವ ಮೂಲಕ ಮೈತ್ರಿಕೂಟದ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರ ಪರ ಸಂಕಲ್ಪ ಮಾಡಿದರು. | Kannada Prabha

ಸಾರಾಂಶ

ಕಲಬುರಗಿ ಲೋಕಸಭಾ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರ ಗೆಲುವಿಗಾಗಿ ನಾವೆಲ್ಲರೂ ಬದ್ಧರಾಗಿದ್ದೆವೆ ಎಂದು ಜೆಡಿಎಸ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಜೇವರ್ಗಿದೇಶದ ಸರ್ವಾಗೀಂಣ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೋಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಕಲಬುರಗಿ ಲೋಕಸಭಾ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರ ಗೆಲುವಿಗಾಗಿ ನಾವೆಲ್ಲರೂ ಬದ್ಧರಾಗಿದ್ದೆವೆ ಎಂದು ಜೆಡಿಎಸ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.

ಅವರು ಪಟ್ಟಣದ ಹೊರವಲಯದ ಬಸವೇಶ್ವರ ಸ್ಟೋನ್ ಕ್ರಷರ್ ಆವರಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸ್ವಾಭೀಮಾನಿ ಕಾರ‍್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಪ್ರಸಕ್ತ ಚುನಾವಣೆಯಲ್ಲಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮೋದಿಯವರನ್ನು ಗೆಲ್ಲಿಸಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರು ನನ್ನನ್ನು ಕರೆದಿದ್ದಾರೆ. ಇನ್ನೂ ಜಿಲ್ಲಾಧ್ಯಕ್ಷ ಯಾವ ಲೆಕ್ಕ ಎಂದು ಪರೋಕ್ಷವಾಗಿ ಶಿವರಾಜ ಪಾಟೀಲ್ ಅವರ ವಿರುದ್ಧ ಹರಿಹಾಯ್ದರು. ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಿಜೆಪಿ ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡುವ ಮೂಲಕ ಎನ್‌ಡಿಎ ಅಭ್ಯರ್ಥಿ ಗೆಲುವಿಗಾಗಿ ಜೆಡಿಎಸ್ ಕೆಲಸ ಮಾಡಲಿದೆ ಎಂದರು.

ಶಾಸಕ ಬಸವರಾಜ ಮತ್ತಿಮಡು ಹಾಗೂ ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್ ಮಾತನಾಡಿ, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರು ಮೂಲತ ಬಿಜೆಪಿಯಿಂದಲೆ ಬಂದವರಾಗಿದ್ದು, ಅಲ್ಲಾಗಿರುವ ಲೋಪ ದೋಶಗಳನ್ನು ಮುಂದಿನ ದಿನಗಳಲ್ಲಿ ಹಾಗಾಗದ ರೀತಿಯಲ್ಲಿ ನೋಡಿಕೊಂಡು ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರನ್ನು ನಾವು ನಿವೆಲ್ಲರೂ ಕೂಡಿ ಅಧಿಕ ಮತಗಳಿಂದ ಗೆಲ್ಲಿಸೋಣ ಎಂದು ಹೇಳಿದರು.

ಕಾರ್‍ಯಕ್ರಮದಲ್ಲಿ ವಿಪ ಸದಸ್ಯ ರಘುನಾಥ ಮಲ್ಕಾಪುರೆ, ಶಿವುಕುಮಾರ ನಾಟಿಕಾರ, ಕೃಷ್ಣಾ ರೆಡ್ಡಿ, ರಮೇಶಬಾಬು ವಕೀಲ್, ಸಿದ್ದಣ್ಣ ಹೂಗಾರ, ಪುಂಡಲಿಕ್ ಗಾಯಕವಾಡ, ಧರ್ಮಣ್ಣ ದೊಡ್ಡಮನಿ, ಮರೇಪ್ಪ ಬಡಿಗೇರ, ಗೋಲ್ಲಾಳಪ್ಪ ಕಡಿ, ರೌಫ್ ಹವಾಲ್ದಾರ್, ಬಸವರಾಜ ಮಾಲಿಪಾಟೀಲ್, ನಾನಾಗೌಡ ಅಲ್ಲಾಪುರ, ಗೋಲ್ಲಾಳಪ್ಪಗೌಡ ಮಾಗಣಗೇರಿ, ಶಿವಾನಂದ ದ್ಯಾಮಗೊಂಡ, ಶರಣಗೌಡ ಯಲಗೋಡ ಸೇರಿದಂತೆ ನೂರಾರು ಜನ ಸ್ವಾಭೀಮಾನಿ ಕಾರ‍್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ