ಗೆಲುವಿನ ಬಳಿಕ ಕೋಡಿಮಠದ ದರ್ಶನ ಪಡೆದ ಉಮೇಶ್ ಮೇಟಿ

KannadaprabhaNewsNetwork |  
Published : May 09, 2026, 01:30 AM IST
ಕೋಡಿಮಠದ ದರ್ಶನ ಪಡೆದ ಉಮೇಶ್ ಮೇಟಿ | Kannada Prabha

ಸಾರಾಂಶ

ಮಠಕ್ಕೆ ಆಗಮಿಸಿದ ಉಮೇಶ್ ಮೇಟಿ, ಮೊದಲು ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮಜ್ಜಯ್ಯ ಅವರ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೋಡಿಮಠದ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳಿಗೆ ರಜತ ಕಿರೀಟ ಧಾರಣೆ ಮಾಡುವ ಮೂಲಕ ಭಕ್ತಿಭಾವ ಸಮರ್ಪಿಸಿದರು. ಮಠದಲ್ಲಿ ನಡೆದ ಭೇಟಿಯ ವೇಳೆ ಉಮೇಶ್ ಮೇಟಿ ಹಾಗೂ ಶ್ರೀಗಳ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆದಿರುವುದು ವಿಶೇಷ ಗಮನ ಸೆಳೆಯಿತು. ರಾಜಕೀಯವಾಗಿ ತಮ್ಮ ಮುಂದಿನ ನಡೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ವಿಚಾರಗಳ ಕುರಿತು ಶ್ರೀಗಳ ಮಾರ್ಗದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಮಠದ ಮೂಲಗಳಿಂದ ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನೂತನ ಶಾಸಕ ಉಮೇಶ್ ಮೇಟಿ, ಸುಕ್ಷೇತ್ರ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಅವರ ಭೇಟಿ ರಾಜಕೀಯ ಹಾಗೂ ಧಾರ್ಮಿಕ ವಲಯಗಳಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು.

ಗುರುವಾರ ರಾತ್ರಿ ಮಠಕ್ಕೆ ಆಗಮಿಸಿದ ಉಮೇಶ್ ಮೇಟಿ, ಮೊದಲು ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮಜ್ಜಯ್ಯ ಅವರ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೋಡಿಮಠದ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳಿಗೆ ರಜತ ಕಿರೀಟ ಧಾರಣೆ ಮಾಡುವ ಮೂಲಕ ಭಕ್ತಿಭಾವ ಸಮರ್ಪಿಸಿದರು.

ಮಠದಲ್ಲಿ ನಡೆದ ಭೇಟಿಯ ವೇಳೆ ಉಮೇಶ್ ಮೇಟಿ ಹಾಗೂ ಶ್ರೀಗಳ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆದಿರುವುದು ವಿಶೇಷ ಗಮನ ಸೆಳೆಯಿತು. ರಾಜಕೀಯವಾಗಿ ತಮ್ಮ ಮುಂದಿನ ನಡೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ವಿಚಾರಗಳ ಕುರಿತು ಶ್ರೀಗಳ ಮಾರ್ಗದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಮಠದ ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತು ಮಾತನಾಡಿದ ಉಮೇಶ್ ಮೇಟಿ, “ಕೋಡಿಮಠ ಮತ್ತು ನಮ್ಮ ಕುಟುಂಬದ ನಡುವೆ ಹಲವು ದಶಕಗಳ ಅವಿನಾಭಾವ ಸಂಬಂಧವಿದೆ. ನನ್ನ ತಂದೆ-ತಾತಂದಿರ ಕಾಲದಿಂದಲೂ ಮಠದೊಂದಿಗೆ ನಮ್ಮ ಕುಟುಂಬ ಆಧ್ಯಾತ್ಮಿಕ ಬಾಂಧವ್ಯ ಹೊಂದಿದೆ. ವೈಯಕ್ತಿಕ ಜೀವನದಲ್ಲಿಯೂ, ರಾಜಕೀಯ ಜೀವನದಲ್ಲಿಯೂ ಶ್ರೀಗಳ ಸಲಹೆ-ಸೂಚನೆಗಳನ್ನು ಗೌರವದಿಂದ ಪಾಲಿಸುತ್ತಾ ಬಂದಿದ್ದೇವೆ. ಚುನಾವಣೆಯಲ್ಲಿ ಜನರು ನೀಡಿದ ಆಶೀರ್ವಾದದ ನಂತರ ಶ್ರೀಗಳ ಆಶೀರ್ವಾದ ಪಡೆಯುವುದು ನಮ್ಮ ಕುಟುಂಬದ ಸಂಪ್ರದಾಯ,” ಎಂದು ಹೇಳಿದರು.

ಈ ವೇಳೆ ಕೋಡಿಮಠದ ಉತ್ತರಾಧಿಕಾರಿಗಳಾದ ಚೇತನ್ ಮರಿದೇವರು ಉಪಸ್ಥಿತರಿದ್ದರು.

*ಬಾಕ್ಸ್ ಐಟಂ:ಮೇಟಿ ಕುಟುಂಬದೊಂದಿಗೆ ಮಠದ ಬಾಂಧವ್ಯ ಹಳೆಯದು: ಕೋಡಿ ಶ್ರೀ

“ಉಮೇಶ್ ಮೇಟಿ ಮಾತ್ರವಲ್ಲ, ಅವರ ತಂದೆ-ತಾತಂದಿರ ಕಾಲದಿಂದಲೂ ಈ ಕುಟುಂಬ ಕೋಡಿಮಠದೊಂದಿಗೆ ಆತ್ಮೀಯ ನಂಟು ಹೊಂದಿದೆ. ಅದೇ ಭಕ್ತಿ-ನಂಬಿಕೆಯಿಂದ ಇಂದು ಉಮೇಶ್ ಮೇಟಿ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದಾರೆ ಎಂದು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳವಾಡಿಯಲ್ಲಿ ಅಂಬೇಡ್ಕರ್‌ ಪುತ್ಥಳಿ ಅನಾವರಣ
ಸಂಬಳ ಹೆಚ್ಚಳಕ್ಕೆ ಒತ್ತಾಯಿಸಿ ಶಾಹಿ ಕಂಪನಿ ಕಾರ್ಮಿಕರ ಪ್ರತಿಭಟನೆ