ಪತಿಯ ಕಿರುಕುಳ ತಾಳಲಾರದೆ ಗೃಹಿಣಿ ನೇಣಿಗೆ ಶರಣು

KannadaprabhaNewsNetwork |  
Published : Sep 20, 2024, 01:31 AM IST
ಸಿಕೆಬಿ-4 ಪತಿ ಹಾಗೂ ಮಕ್ಕಳೊಂದಿಗೆ ಮೃತ ಶೋಭಾ  | Kannada Prabha

ಸಾರಾಂಶ

ಮೃತ ಶೋಭಾಳು ಅಮೃತಾ, ಅನಿತಾ ಮತ್ತು ಮನೋಜ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ನಂತರ ಪುತ್ರಿ ಅಮೃತಾ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ನಗರ ಠಾಣಾ ಪಿಎಸ್ಐ ಎಚ್.ನಂಜುಂಡಯ್ಯ ಸ್ಥಳ ಮಹಜರು ನಡೆಸಿ, ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಪತಿ ಸೀನಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಪತಿಯ ಕಿರುಕುಳ ತಾಳಲಾರದೇ ಗೃಹಿಣಿ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಗರದ ಎಚ್.ಎಸ್.ಗಾರ್ಡನ್ ಬಡಾವಣೆಯಲ್ಲಿ ಗುರುವಾರ ನಡೆದಿದೆ .ಶೋಭಾ (48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಶೋಭಾಳ ಪತಿ ಶ್ರೀನಿವಾಸ್, ಆಲಿಯಾಸ್ ಸೀನಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದು, ಕುಡಿತದ ಚಟಕ್ಕೆ ಬಿದ್ದು ಯಾವಾಗಲೂ ಪತ್ನಿಯನ್ನು ತಳಿಸುತ್ತಿದ್ದ ಎನ್ನಲಾಗಿದ್ದು, ಇದರಿಂದ ಬೇಸತ್ತು ಮನ ನೊಂದ ಶೋಭಾ ಇಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೃತ ಶೋಭಾಳು ಅಮೃತಾ, ಅನಿತಾ ಮತ್ತು ಮನೋಜ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ನಂತರ ಪುತ್ರಿ ಅಮೃತಾ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ನಗರ ಠಾಣಾ ಪಿಎಸ್ಐ ಎಚ್.ನಂಜುಂಡಯ್ಯ ಸ್ಥಳ ಮಹಜರು ನಡೆಸಿ, ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಪತಿ ಸೀನಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ