ಅನಧಿಕೃತ ಗೈರು, ಐವರು ಎನ್‍ಎಚ್‍ಎಂ ಸಿಬ್ಬಂದಿ ವಜಾ

KannadaprabhaNewsNetwork |  
Published : Nov 22, 2024, 01:15 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ    | Kannada Prabha

ಸಾರಾಂಶ

ಚಿತ್ರದುರ್ಗ: ಎನ್‍ಎಚ್‍ಎಂ ಅಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐವರು ಎನ್‌ಎಚ್‌ಎಂ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸೊಸೈಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಚಿತ್ರದುರ್ಗ: ಎನ್‍ಎಚ್‍ಎಂ ಅಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐವರು ಎನ್‌ಎಚ್‌ಎಂ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸೊಸೈಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಿಇಒ ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೊಸೈಟಿ ಸಭೆ ಹಾಗೂ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸಂಬಂಧ ಪ್ರಸ್ತಾವನೆ ಮಂಡಿಸಿದಾಗ ಅನುಮೋದಿಸಲಾಯಿತು.ಚಳ್ಳಕೆರೆ ತಾಲೂಕು ದೊಡ್ಡ ಉಳ್ಳಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಘಟಪರ್ತಿ ಉಪಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಹಾಲಕ್ಷ್ಮೀ, ಹಿರಿಯೂರು ತಾಲೂಕು ಬೇತೂರು ಪಾಳ್ಯ ಉಪಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಲತಾ, ಚಳ್ಳಕೆರೆ ತಾಲೂಕು ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಕೆ.ಸಿ.ಅಶ್ವಿನಿ, ದೊಡ್ಡಚೆಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಟಿ.ಜಯಲಕ್ಷ್ಮೀ ಹಾಗೂ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ಆರ್.ಲಕ್ಷ್ಮೀದೇವಿ ವಜಾಗೊಂಡ ಸಿಬ್ಬಂದಿಯಾಗಿದ್ದಾರೆ.ಸಿಇಒ ಸೋಮಶೇಖರ್ ಮಾತನಾಡಿ, ಆರೋಗ್ಯ ಕಾರ್ಯಕ್ರಮಗಳ ಕುರಿತು ಜನರಿಗೆ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸಬೇಕು. ಈ ಬಗ್ಗೆ ಉದಾಸಿನ ಬೇಡ. ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಆಶಾ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡುತ್ತಿದ್ದಾರೆ. ಆಶಾ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆಶಾ ವಿಶ್ರಾಂತಿ ಕೊಠಡಿ ವ್ಯವಸ್ಥೆ ಮಾಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರಿಗೆ ಸಿಇಓ ಸೂಚಿಸಿದರು.

2019ರ ಜನಸಂಖ್ಯೆಯಂತೆ ಜಿಲ್ಲೆಯಲ್ಲಿ 1481 ಆಶಾ ಕಾರ್ಯಕರ್ತರು ಇದ್ದು, ಕೆಲಸ ಬಿಟ್ಟವರು, ಮರಣ ಇತ್ಯಾದಿ ಕಾರಣಗಳಿಂದಾಗಿ 1445 ಆಶಾ ಇದ್ದು, ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಆಶಾ ಕಾರ್ಯಕರ್ತರ ನೇಮಕ ಮಾಡುವಂತೆ ಜಿಲ್ಲಾ ಆಶಾ ಮೆಂಟರ್ ಸಭೆಗೆ ಮನವಿ ಮಾಡಿದರು.ಇದೇ ವೇಳೆ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ, ವಿಫ್ಸ್ ಕಾರ್ಯಕ್ರಮ (ಕಬ್ಬಿಣಾಂಶದ ಮಾತ್ರೆ), ಶುಚಿ ಕಾರ್ಯಕ್ರಮ, ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ಜಂತುಹುಳು ನಿವಾರಣಾ ದಿನ ಅನುಷ್ಠಾನ ಕಾರ್ಯತಂತ್ರ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಮತ್ತು ತಡೆಗಟ್ಟುವ ಕಾರ್ಯಕ್ರಮದ ಅಂಗವಾಗಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ