ಮಂಗಳೂರು: ಅನಧಿಕೃತ ಒಂಟೆ/ಜಾನುವಾರುಗಳ ವಧೆ, ಸಾಗಾಟ ಹಾಗೂ ಅನಧಿಕೃತ ಮಾಂಸ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮವಹಿಸಲು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.
ಜಾನುವಾರು ಸಾಗಾಣಿಕೆ ಸಮಯದಲ್ಲಿ ಪರವಾನಗಿಯನ್ನು ಕಡ್ಡಾಯವಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆಯಬೇಕು. ಅನಧಿಕೃತ ಜಾನುವಾರು ಸಾಗಾಣಿಕೆಯನ್ನು ತಡೆಗಟ್ಟಲು ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಜಾನುವಾರು ಸಾಗಾಟ ವಾಹನಗಳ ಮೇಲೆ ನಿಗಾ ವಹಿಸಬೇಕು. ಜಾನುವಾರು ಸಾಗಾಣಿಕೆ ಮಾಡುವಾಗ ಅಧಿಕೃತ ದಾಖಲೆಗಳಾದ ಪರವಾನಿಗೆ, ಜಾನುವಾರು ಮಾಲೀಕರ ವಿವರಗಳು, ಕೊಂಡುಕೊಳ್ಳುವ ಮಾಲೀಕರ ವಿವರ, ವಾಹನ ದಾಖಲಾತಿ, ಚಾಲಕರ ವಿವರ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಅವರು ಹೇಳಿದರು.ಯಾವುದೇ ಕಟ್ಟಡಗಳಲ್ಲಿ ಅನಧಿಕೃತ ಪ್ರಾಣಿ ವಧೆ ಕಂಡುಬಂದಲ್ಲಿ ಅಂತಹ ಕಟ್ಟಡಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಬೇಕು. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುವುದು ಮತ್ತು ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಸಮಿತಿ ಸದಸ್ಯರು ಕ್ರಮ ವಹಿಸಬೇಕು. ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಮುಖ್ಯ ಪಶುಸಂಗೋಪನಾ ಅಧಿಕಾರಿ ಡಾ.ಅಶೋಕ್ ಕೆ.ಆರ್, ಅಡಿಷನಲ್ ಎಸ್ಪಿ ಅನಿಲ್ಕುಮಾರ್ ಮತ್ತಿತರರು ಇದ್ದರು.