- 15 ದಿನಗಳ ಗಡುವು ನೀಡಿದ್ದ ಡಿಸಿ । ಮೈಕೊಡವಿ ಎದ್ದ ಪಾಲಿಕೆ । ಕ್ರೇನ್, ಜೆಸಿಬಿ, ಟ್ರ್ಯಾಕ್ಟರ್ ಬಳಸಿ ತೆರವು ಕಾರ್ಯಾಚರಣೆ- ಪೊಲೀಸ್, ಬೆಸ್ಕಾಂ ಸಹಯೋಗದಲ್ಲಿ ಬೆಳ್ಳಂಬೆಳಗ್ಗೆಯೇ ಫೀಲ್ಡಿಗಿಳಿದ ಅಧಿಕಾರಿಗಳು । ಹೈಕೋರ್ಟ್ ಆದೇಶ ಹಿನ್ನೆಲೆ ಕ್ರಮ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಡಾ. ಎಂ.ಸಿ. ಮೋದಿ ವೃತ್ತ ಸೇರಿದಂತೆ ವಿವಿಧ ಕಡೆ ರೈಲ್ವೆ ಹಳಿಗಳ ಮಾದರಿಯ ಭಾರಿ ಗಾತ್ರದ ಕಬ್ಬಿಣದ ಸರಳುಗಳನ್ನು ನೆಲದಲ್ಲಿ ಹೂತು, ಎತ್ತರವಾಗಿ, ಅಗಲವಾಗಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಅಳವಡಿಸಿದ್ದ ಫ್ಲೆಕ್ಸ್, ಹೋರ್ಡಿಂಗ್ಸ್ಗಳನ್ನು ಕಟರ್, ಕ್ರೇನ್ಗಳು, ಜೆಸಿಬಿ ಯಂತ್ರ, ಟ್ರ್ಯಾಕ್ಟರ್ಗಳ ಸಹಾಯದಿಂದ ತೆರವುಗೊಳಿಸುವ ಕಾರ್ಯವನ್ನು ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಯಿತು.
ಮಹಾನಗರ ಪಾಲಿಕೆ, ದಾ-ಹ ನಗರಾಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ತಾರದೇ, ಅನುಮತಿಯನ್ನೂ ಪಡೆಯದೇ, ಯಾವುದೇ ಸುರಕ್ಷತಾ ಕ್ರಮಗಳನ್ನು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ, ಹೋರ್ಡಿಂಗ್ಸ್, ಫ್ಲೆಕ್ಸ್ ಅಳಡಿಸಿದ್ದು, ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಪಾದಚಾರಿ ಮಾರ್ಗ, ಪಾರ್ಕ್ಗಳ ಸೌಂದರ್ಯಕ್ಕೂ ಇದರಿಂದ ಧಕ್ಕೆಯಾಗುತ್ತಿದೆ. ಇದಕ್ಕೆ ಕಾರಣರಾದವರ ವಿರುದ್ಧ ಎಫ್ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಪಾಲಿಕೆಗೆ ಆದೇಶಿಸಿದ್ದರು.ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪಾಲಿಕೆ ಫೀಲ್ಡಿಗೆ ಇಳಿಯಿತು. ಸುಮಾರು 20ಕ್ಕೂ ಹೆಚ್ಚು ಕಡೆ ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್ಗಳನ್ನು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ತೆರವು ಮಾಡಿಸುತ್ತಿದ್ದಾರೆ. ತೆರವು ಕಾರ್ಯಾಚರಣೆ ವೇಳೆ ಪೊಲೀಸ್ ಭದ್ರತೆ, ಬೆಸ್ಕಾಂ ಇಲಾಖೆ, ಅರಣ್ಯ ಇಲಾಖೆಯ ಸಹಕಾರ ಪಡೆಯಲಾಗಿದೆ.
ಕರ್ನಲ್ ಎಂ.ಬಿ. ರವೀಂದ್ರನಾಥ ವೃತ್ತದಲ್ಲಿ ಅನಧಿಕೃತ ವ್ಯಕ್ತಿಗಳು ಪಾಲಿಕೆ, ದೂಡಾ ಗಮನಕ್ಕೆ ತಾರದೇ, ಹೋರ್ಡಿಂಗ್ಸ್, ಫ್ಲೆಕ್ಸ್ ಅಳವಡಿಸಿದ್ದರು. ಅಲ್ಲದೇ, ಯಾವುದೇ ಸುರಕ್ಷಿತ ಕ್ರಮಗಳನ್ನೂ ಕೈಗೊಂಡಿರಲಿಲ್ಲ. ಪಾದಚಾರಿ ಮಾರ್ಗ, ಪಾರ್ಕ್ ಸೌಂದರ್ಯಕ್ಕೂ ಧಕ್ಕೆ ತಂದಿದ್ದರು. ಅವನ್ನು ತೆರವುಗೊಳಿಸಿ, ಎಫ್ಐಆರ್ ದಾಖಲಿಸುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಲಿಖಿತ ಆದೇಶ ಹೊರಡಿಸಿ, ಅವುಗಳ ತೆರವಿಗೆ 15 ದಿನಗಳ ಗಡುವನ್ನು ನೀಡಿದ್ದರಿಂದ ಇಷ್ಟು ದಿನ ನಿದ್ದೆಗೆ ಜಾರಿದ್ದ ಆಯುಕ್ತರಾದಿಯಾಗಿ ಅಧಿಕಾರಿಗಳು ಈಗ ಎಚ್ಚೆತ್ತಂತೆ ಕಾಣುತ್ತಿದೆಯೆಂಬ ಮಾತುಗಳು ಸಹ ಜನರಿಂದ ಕೇಳಿಬರುತ್ತಿವೆ.
ಬಾಕ್ಸ್ * ಎಚ್ಚೆತ್ತು ಕೆಲಸ ಮಾಡಿ: ಪಾಲಿಕೆಗೆ ಡಿಸಿ ಚಾಟಿ ನ್ಯಾಯಾಲಯಗಳಲ್ಲಿ ಸಾರ್ವಜನಿಕ ರಸ್ತೆ, ಇತರೆ ಸ್ಥಳಗಳಲ್ಲಿ ಕರ್ನಾಟಕ ಡಿಸ್ಫಿಗರ್ಮೆಂಟ್ ಆಕ್ಟ್ ನಡಿ ಕಾನೂನುಬಾಹಿರವಾಗಿ ಯಾವುದೇ ಕಟ್ಟಡ ನಿರ್ಮಿಸುವುದು, ಅನಧಿಕೃತ ಕೆಲಸ ಮಾಡದಂತೆ ಆದೇಶ ನೀಡಲಾಗಿದೆ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಮೊಕದ್ದಮೆಯಲ್ಲಿ ಹೈಕೋರ್ಟ್ ಬಿಬಿಎಂಪಿಗೆ ಸಂಬಂಧಿಸಿದಂತೆ ಹೋರ್ಡಿಂಗ್ಸ್, ಜಾಹೀರಾತು ಪ್ರಚುರಪಡಿಸುವ ಬಗ್ಗೆ ಮತ್ತು ಅಕ್ರಮ ಜಾಹೀರಾತು ನಿಯಂತ್ರಿಸಲು ಆದೇಶಿಸಿದೆ. ಲೋಕಾಯುಕ್ತರು, ಉಪ ಲೋಕಾಯುಕ್ತರು ಸಹ ಅನೇಕ ಸೂಚನೆ, ಆದೇಶಗಳನ್ನು ಸರ್ಕಾರ, ನಗರಾಭಿವೃದ್ಧಿ ಇಲಾಖೆಗೆ ನೀಡಿದೆ. ಕೆಲ ಪ್ರಕರಣ ವಿಚಾರಣೆ ಹಂತದಲ್ಲಿವೆ. ಈ ಸ್ಥಿತಿಯಲ್ಲಿ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಿ ಎಂದು ಡಿಸಿ ಸೂಚನೆ ನೀಡಿದ್ದರು.
- - - ಬಾಕ್ಸ್- ಜಾಹೀರಾತು ಫಲಕ ಅಳವಡಿಸಲು ಅಲ್ಲಿದ್ದ ಮರಗಳನ್ನೇ ತೆರವುಗೊಳಿಸಿರುವುದು ಸಹ ಕಂಡು ಬಂದಿದೆ
- ಅನಧಿಕೃತ ಜಾಹೀರಾತು ಫಲಕ ಅಳವಡಿಸಿದವರಿಂದ ದಂಡ ವಿಧಿಸಿ, ಅಷ್ಟೂ ಹಣ ವಸೂಲಿಗೆ ಕಟ್ಟಪ್ಪಣೆ
- - - - (ಫೋಟೋ ಬರಲಿವೆ)