ರಾಣಿಬೆನ್ನೂರು: ನಗರದ ಹಳೇ ಪಿ.ಬಿ. ರಸ್ತೆಯ ಕೆಇಬಿ ಗಣೇಶ ದೇವಸ್ಥಾನ ಬಳಿ ಫುಟ್ಪಾತ್ನಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ಬುಧವಾರ ಬೆಳಗಿನ ಜಾವ ನಗರಸಭೆ ಪೌರಾಯುಕ್ತ ಪಕ್ಕೀರಪ್ಪ ಇಂಗಳಗಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.ಈ ಕುರಿತು ಪೌರಾಯುಕ್ತ ಪಕ್ಕೀರಪ್ಪ ಇಂಗಳಗಿ ಮಾತನಾಡಿ, ನಗರದಲ್ಲಿ ವಿವಿಧ ಕಡೆ ರಸ್ತೆಯ ಫುಟ್ಪಾತ್ ಮೇಲೆ ಹಣ್ಣಿನ ಅಂಗಡಿ, ಎಗ್ರೈಸ್, ಬೀಡಿ ಅಂಗಡಿ, ಚಹಾ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದರೂ ಇದರಿಂದ ರಸ್ತೆಯ ಮೇಲೆ ಸಂಚಾರ ಮಾಡುವರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯವಿರುವುದರಿಂದ ಸಾರ್ವಜನಿಕರ ಪ್ರಾಣಹಾನಿ ತಪ್ಪಿಸುವ ನಿಟ್ಟಿನಲ್ಲಿ ಫುಟ್ಪಾತ್ ಅಂಗಡಿ ಮಾಲೀಕರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು.
ಶಿಗ್ಗಾಂವಿ: ತಾಲೂಕಿನ ತಡಸ ಗ್ರಾಮದಲ್ಲಿ ಬಾಲ್ಯವಿವಾಹವಾಗಿರುವ ಕುರಿತು ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸದಸ್ಯರು ಬಾಲಕಿಯನ್ನು ಪಟ್ಟಣದ ಸಿಡಿಪಿಒ ಕಚೇರಿಗೆ ಕರೆಸಿ ಆಕೆಯೊಂದಿಗೆ ಮುಕ್ತವಾಗಿ ಸಮಾಲೋಚನೆ ಮಾಡಿದ್ದಾರೆ.ಬಳಿಕ ಬಾಲಕಿಯನ್ನು ಹೆಚ್ಚಿನ ಸಮಾಲೋಚನೆಗಾಗಿ ೩ ದಿನ ಅಭಿರಕ್ಷಣೆಗೆ ಒಳಪಡಿಸಿದ್ದು, ರಾಣಿಬೆನ್ನೂರಿನ ಸರ್ಕಾರಿ ಬಾಲಕಿಯರ ಮಂದಿರಕ್ಕೆ ಕಳಿಸಲಾಗಿದೆ.ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಗೀತಾ ಪಾಟೀಲ ಮಾತನಾಡಿ, ಬಾಲಕಿಯೊಂದಿಗೆ ಇನ್ನೂ ಹೆಚ್ಚಿನ ಸಮಾಲೋಚನೆ ಮಾಡುವ ಅವಶ್ಯಕತೆ ಇದ್ದು, ಕಾನೂನಿನ ಇತರ ಪ್ರಕ್ರಿಯೆಗೆ ಒಳಪಡಿಸಲಾಗುತ್ತದೆ. ಅಪರಾಧ ಸಾಬೀತಾದರೆ ಅಪರಾಧಿಗಳಿಗೆ ಸೂಕ್ತ ಕಾನೂನು ಕ್ರಮ ಆಗುತ್ತದೆ ಎಂದರು.