ಕೋಡಾಲ ಡೇರಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಅವಿರೋಧ ಆಯ್ಕೆ

KannadaprabhaNewsNetwork |  
Published : Jun 30, 2026, 01:45 AM IST
29ಕೆಎಂಎನ್ ಡಿ20 | Kannada Prabha

ಸಾರಾಂಶ

ಪಾಂಡವಪುರ ಕೋಡಾಲ ಹಾಲು ಉತ್ಪಾದಕರ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷೆ ಸುಜಾತ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರಾಮಗೂಳೀಗೌಡ, ನರಸಿಂಹೇಗೌಡ ಅವಿರೋಧ ಆಯ್ಕೆ.

ಪಾಂಡವಪುರ:

ತಾಲೂಕಿನ ಕೋಡಾಲ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಮಗೂಳೀಗೌಡ ಮತ್ತು ನರಸಿಂಹೇಗೌಡ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಹಿಂದಿನ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷೆ ಸುಜಾತ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಸಂಘದಲ್ಲಿ ನಡೆದ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಮಗೂಳೀಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನರಸಿಂಹೇಗೌಡ ಹೊರತುಪಡಿಸಿ ಉಳಿದ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ - ಉಪಾಧ್ಯಕ್ಷರಾಗಿ ನರಸಿಂಹೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಡೇರಿ ಕಾರ್ಯದರ್ಶಿ ಶಂಕರ ಎನ್ ಘೋಷಿಸಿದರು.

ಸಂಘದ ಅಧ್ಯಕ್ಷರಾಗಿ ರಾಮಗೂಳೀಗೌಡ, ಉಪಾಧ್ಯಕ್ಷರಾಗಿ ನರಸಿಂಹೇಗೌಡ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆಯೇ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷ ರಾಮಗೂಳೀಗೌಡ, ಉಪಾಧ್ಯಕ್ಷ ನರಸಿಂಹೇಗೌಡ ಅವರನ್ನು ಎಲ್ಲಾ ನಿರ್ದೇಶಕರು ಅಭಿನಂದಿಸಿದರು.

ಈ ವೇಳೆ ಡೇರಿ ನಿರ್ದೇಶಕರಾದ ಕುಮಾರ್ ಕೆ., ಸ್ವಾಮೀಗೌಡ ಕೆ., ದೇವರಾಜು, ಕುಮಾರ, ರಾಮೇಗೌಡ, ಸುಜಾತ, ಲೋಕೇಶ್ ಕೆ.ಎನ್., ದಳವಾಯಿಗೌಡ, ಶಿವರಾಜು ಮುಖಂಡರಾದ ಗ್ರಾಪಂ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಕಾಶ್ ಕೆ.ಕೆ., ಮರೀಗೌಡ, ವೆಂಕಟರಾಮೇಗೌಡ, ಕರೀಗೌಡ, ಪುಟ್ಟೇಗೌಡ, ಸುಧಾರಕ, ರವಿ ಸೇರಿದಂತೆ ಡೇರಿ ಸಿಬ್ಬಂದಿಗಳು, ಮುಖಂಡರು ಹಾಜರಿದ್ದರು.

ನಾಡಿದ್ದು ವಿಚಾರ ಸಂಕಿರಣ

ಕನ್ನಡಪ್ರಭ ವಾರ್ತೆ ಮಂಡ್ಯಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ ಜುಲೈ 2ರಂದು ನಗರದ ಗಾಂಧಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಇಂದಿನ ಶಿಕ್ಷಣದಲ್ಲಿ ದೇಶದ ಪ್ರಗತಿಯ ಒಂದು ಚಿಂತನೆ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿ ವಿಚಾರವಾಗಿ ಗಣ್ಯರ ಜೊತೆಗೆ ಚಿಂತನೆ ನಡೆಸಿ ನಿರ್ಣಯಗಳನ್ನು ಕೈಗೊಳ್ಳಲು ಈ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದರು.ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಳಿಮಲೆ ವಿಚಾರ ಮಂಡನೆ ಮಾಡುವರು. ಕನ್ನಡ ಸೇನೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಧ್ಯಕ್ಷತೆ ವಹಿಸುವರು ಎಂದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಮನೋಜವಂ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಡಿ.ಆರ್.ಸುಮನ್, ಕನ್ನಡ ಸೇನೆಯ ರಾಜ್ಯಾ ಉಪಾಧ್ಯಕ್ಷ ಎನ್.ಮುನಿರಾಜೇಗೌಡ, ಕಾರ್ಯಾಧ್ಯಕ್ಷ ಮುನಿಕೃಷ್ಣ, ಮಹಿಳಾ ಜಿಲ್ಲಾಧ್ಯಕ್ಷೆ ಸೌಭಾಗ್ಯ ಶಿವಲಿಂಗು, ಜಿಲ್ಲಾ ಕಾರ್ಯಾಧ್ಯಕ್ಷ ಮಂಡಿಬೆಟ್ಟಹಳ್ಳಿ ಮಂಜುನಾಥ್ ಅತಿಥಿಗಳಾಗಿ ಭಾಗವಹಿಸುವ ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕಿ ದೇವಮ್ಮ, ಮಹಿಳಾ ಜಿಧ್ಯಕ್ಷೆ ಸೌಭಾಗ್ಯ ಶಿವಲಿಂಗು, ಕಾರ್ಯಾಧ್ಯಕ್ಷ ಮಂಡಿಬೆಟ್ಟಹಳ್ಳಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕಮ್ಮನಾಯಕನಹಳ್ಳಿ ಮಂಜುನಾಥ್, ಮುಖಂಡ ಸತೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ
ಎಂಎಂಹಿಲ್ಸ್‌ನಿಂದ ಬರುತ್ತಿದ್ದ ಸಾರಿಗೆ ಬಸ್ಸಿನ ಟೈಯರ್‌ ಸ್ಫೋಟ: ಇಬ್ಬರು ಬಲಿ, 40 ಗಾಯ