ಕನ್ನಡಪ್ರಭವಾರ್ತೆ ತರೀಕೆರೆ
ಮಂಗಳವಾರ ಶ್ರೀ ಅಮೃತೇಶ್ವರ ಪ್ರೌಢಶಾಲೆ ವತಿಯಿಂದ ಶಾಲೆ ಆವರಣದಲ್ಲಿ ಏರ್ಪಾಡಾಗಿದ್ದ ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮ
ದಲ್ಲಿ ಅವರು ಮಾತನಾಡಿ, ಬಾಲ ಕಾರ್ಮಿಕರ ವಿರೋಧಿ ಕಾನೂನು ಅಸ್ತಿತ್ವಕ್ಕೆ ಬಂದು ಬಾಲ ಕಾರ್ಮಿಕರು ಬೇರ ಬೇರೆ ಉದ್ಯಮಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸಿರುವುದನ್ನು ತಿಳಿಸಿದರು,ಅಲ್ಲದೆ ಸಂವಿಧಾನದ 39ನೇ ವಿಧಿ ಪ್ರಕಾರ ಗಣಿ ಮತ್ತು ಉದ್ಯಮಗಳಲ್ಲಿ 14ನೇ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳು ಕಾಸಿಗಾಗಿ ಕೆಲಸ ಮಾಡವುದನ್ನು ನಿಷೇಧಿಸಿರುವ ಬಗ್ಗೆ ಮಕ್ಕಳಿಗೆ ತಿಳಿಸಿ, 14 ವರ್ಷದೊಳಗಿನವರು ದುಡಿಮೆಗಾಗಿ ಬೇರೆ ಉದ್ಯಮಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ಮಾನಸಿಕ ಮತ್ತು ದೈಹಿಕ ವಿಕಾಸ ಕುಂಠಿತವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿನಿ ಸಹನ ಅವರು ಶಾಲಾ ಮಕ್ಕಳಿಗೆ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕರಾದ ಖಜರ್ ಖಾನ್, ರಮಾಕಾಂತ್, ಸತೀಶ್ ನಂದಿಹಳ್ಳಿ, ಪಂಚಾಕ್ಷರಪ್ಪ, ಸವಿತಮ್ಮ, ಪ್ರಭಾಕರ್, ಮತ್ತಿತರರು ಭಾಗವಹಿಸಿದ್ದರು.