ಅಂಡರ್‌ಪಾಸ್‌ ನೀರು ಸಂಗ್ರಹ: ಸವಾರರಿಗೆ ತೊಂದರೆ

KannadaprabhaNewsNetwork |  
Published : Jun 03, 2024, 12:31 AM IST
ಗಾಂಧಿನಗರದ ಅಂಡರ್‌ಪಾಸ್‌ನಲ್ಲಿ ಮಳೆ ನೀರು ಶೇಖರಣೆ : ಸವಾರರಿಗೆ ತೊಂದರೆ | Kannada Prabha

ಸಾರಾಂಶ

ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ತಿಪಟೂರು: ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಮಳೆ ಬಂದರೆ ಸಾಕು ಅಂಡರ್‌ಪಾಸ್ ಕೆಳಭಾಗದಲ್ಲಿ ಅತೀ ಹೆಚ್ಚು ನೀರು ಸಂಗ್ರಹವಾಗುವುದರಿಂದ ವಾಹನ ಸವಾರರಿಗೆ ಓಡಾಡಲು ಸಾಕಷ್ಟು ತೊಂದೆಯಾಗುತ್ತಿದೆ. ಅಂಡರ್‌ಪಾಸ್‌ನ ಒಂದು ಭಾಗದಲ್ಲಿ ಮಾತ್ರ ವಾಹನ ಸವಾರರು ಓಡಾಡುತ್ತಿದ್ದು ಇದರಿಂದ ಅಪಘಾತಗಳಾಗುವ ಸಂಭವ ಹೆಚ್ಚಿದೆ. ಈ ಬಗ್ಗೆ ಹಲವು ದಿನಗಳಿಂದಲೂ ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಅಂಡರ್‌ಪಾಸ್ ಮೂಲಕ ಕೆರೆಗೋಡಿ-ರಂಗಾಪುರ, ದಸರೀಘಟ್ಟಕ್ಕೆ ಜನರು, ವಾಹನಗಳು ಓಡಾಡುತ್ತವೆ. ಕೊಬ್ಬರಿ ಮಾರುಕಟ್ಟೆ ಗಾಂಧಿನಗರ, ಬಸವೇಶ್ವರ ನಗರ ಭಾಗದ ಬಡಾವಣೆಗಳ ಜನರು ಸಹ ಇದೇ ರಸ್ತೆಯನ್ನು ಅವಲಂಭಿಸಿದ್ದಾರೆ. ಮಳೆ ನೀರು, ಕೆಸರು ತುಂಬಿರುವುದರಿಂದ ತೊಂದರೆಯಾಗಿದೆ. ಅಂಡರ್‌ಪಾಸ್ ನಿರ್ಮಿಸುವಾಗ ಚರಂಡಿ ವ್ಯವಸ್ಥೆ ಮಾಡಿದ್ದರೂ ಮಣ್ಣು ತುಂಬಿಕೊಂಡು ಚರಂಡಿ ಕಟ್ಟಿಕೊಂಡಿದೆ. ನಿಗದಿತ ಸಮಯಕ್ಕೆ ಮಣ್ಣು ತೆಗೆದು ಸ್ವಚ್ಚತೆ ಮಾಡದ ಕಾರಣ ಮಣ್ಣಿನ ಮೇಲೆ ದ್ವಿಚಕ್ರ ವಾಹನಗಳು, ಆಟೋಗಳು ಆಯತಪ್ಪಿ ಬಿದ್ದು ಎದ್ದು ಕೈಕಾಲು ಮುರಿದುಕೊಳ್ಳುವ ಸನ್ನಿವೇಶ ಉಂಟಾಗಿದೆ. ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಚರಂಡಿಯನ್ನು ಸ್ವಚ್ಚತೆ ಮಾಡಿ, ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!