ಕಲೆಗೆ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆ: ಎಂ. ಎನ್. ಮಠದ

KannadaprabhaNewsNetwork |  
Published : Sep 22, 2024, 02:02 AM IST
ವಿಶ್ವಕರ್ಮ ಜಯಂತಿ ನಿಮಿತ್ತ ಯರಗಟ್ಟಿ-ಸವದತ್ತಿ ತಾಲೂಕು ವಿಶ್ವಕರ್ಮ ಸಮಾಜದವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ತಹಸೀಲ್ದಾರ ಎಂ.ಎನ್. ಮಠದ ಹೇಳಿದರು.

ಕನ್ನಡಪ್ರಭ ವಾರ್ತೆ ಯರಗಟ್ಟಿ

ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ತಹಸೀಲ್ದಾರ ಎಂ. ಎನ್. ಮಠದ ಹೇಳಿದರು.

ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಮಂಗಳವಾರ ತಾಲೂಕಿನ ವಿಶ್ವಕರ್ಮ ಸಮಾಜದವರು ಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.

ಗಣಪತಿ ಮಹಾರಾಜರು ಸಾನಿಧ್ಯ ವಹಿಸಿದ್ದರು, ಪಪಂ ಮುಖ್ಯಾಧಿಕಾರಿ ಡಿ.ಎನ್. ತಹಶೀಲ್ದಾರ ಅಧ್ಯಕ್ಷತೆ ವಹಿಸಿದ್ದರು. ಪಪಂ ಎಂಜಿನಿಯರ್‌ ಕಾಮಣ್ಣವರ, ಮುರಳಿ ಬಡಿಗೇರ, ರಾಜ್ಯ ಉಪಾಧ್ಯಕ್ಷ ಸಿದ್ದಯ್ಯ ವಡಿಯರ, ಮೌನೇಶ್ವರ ಮಾಯಾಚಾರಿ, ಅಶೋಕ ಬಡಿಗೇರ, ಅರ್ಜುನ ಕಮ್ಮಾರ, ಈಶ್ವರ ಬಡಿಗೇರ, ಬಾಲಪ್ಪ ಬಡಿಗೇರ, ಸಂತೋಷ ಕಂಬಾರ, ಸಂತೋಷ ಬಡಿಗೇರ, ದ್ಯಾಮಣ್ಣ ಬಡಿಗೇರ, ಉಮೇಶ ಬಡಿಗೇರ, ರಮೇಶ ಬಡಿಗೇರ, ಆನಂದ ಬಡಿಗೇರ, ಶಂಕರ ಬಡಿಗೇರ ಸೇರಿದಂತೆ ಯರಗಟ್ಟಿ-ಸವದತ್ತಿ ತಾಲೂಕು ವಿಶ್ವಕರ್ಮ ಸಮಾಜದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ