ಮಂಡ್ಯ ಮಂಜುನಾಥ
ಮಂಡ್ಯ ಸಂಸದರೂ ಆಗಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಕೇಂದ್ರ ಬಜೆಟ್ನಲ್ಲಿ ಮಂಡ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಏನಾದರೂ ಮಹತ್ವದ ಕೊಡುಗೆ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ.
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.ಎರಡು ದಶಕ ಹಿಂದಿನ ಹೆಜ್ಜಾಲ- ಚಾಮರಾಜನಗರ ರೈಲ್ವೆ ಯೋಜನೆಯನ್ನು ಬಜೆಟ್ಗೆ ಸೇರಿಸುವುದಾಗಿ ಭರವಸೆ ಸಿಕ್ಕಿತ್ತು. ಆ ಯೋಜನೆ ಏನಾಯಿತೆಂಬುದೇ ಬಜೆಜ್ನಲ್ಲಿ ಕಾಣುತ್ತಿಲ್ಲ. ಆ ಯೋಜನೆಗೆ ಹಣಕಾಸನ್ನೂ ಕಾಯ್ದಿರಿಸಿಲ್ಲ. ಉದ್ಯೋಗ ಸೃಷ್ಟಿಗೆ ಪೂರಕವಾಗಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೂ ಒಲವನ್ನು ತೋರಿಲ್ಲ. ಹಾಗಾದರೆ ಚುನಾವಣೆಯಲ್ಲಿ ಗೆದ್ದ ಬಳಿಕ ಜಿಲ್ಲೆಯಲ್ಲಿ ಯಾವ ಯಾವ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶವಿದೆ ಎಂಬ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು ಏಕೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಪ್ರಶ್ನೆಯಾಗಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಎನ್ಡಿಎ ಒಕ್ಕೂಟದ ಸದಸ್ಯರಾಗಿದ್ದು, ಉತ್ತಮವಾದ ಖಾತೆಯನ್ನು ಹೊಂದಿದ್ದರೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈಷುಗರ್ ಕಾರ್ಖಾನೆಗೆ ಆರ್ಥಿಕ ನೆರವು ದೊರಕಿಸುವಲ್ಲಿ ಹಾಗೂ ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗುವಂತೆ ಏನಾದರೊಂದು ಕೊಡುಗೆ ದೊರಕಿಸಿಕೊಡಲಾಗದಷ್ಟು ದುರ್ಬಲರಾದರೇ ಎಂಬ ಅನುಮಾನ ಜಿಲ್ಲೆಯ ಜನರನ್ನು ಕಾಡಲಾರಂಭಿಸಿದೆ.
ಸೋಮನಹಳ್ಳಿ, ಗೆಜ್ಜಲಗೆರೆ, ತೂಬಿನಕೆರೆ ಕೈಗಾರಿಕಾ ಪ್ರದೇಶಗಳ ಮಾದರಿಯಲ್ಲಿ ಜಿಲ್ಲೆಯ ವಿವಿಧೆಡೆ ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಆಸಕ್ತಿ ತೋರಿಸಬಹುದಿತ್ತು. ಕೃಷಿಗೆ ಪೂರಕವಾಗುವಂತೆ ಉದ್ದಿಮೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವುದರೊಂದಿಗೆ ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಿ ಮಂಡ್ಯ ಜಿಲ್ಲೆಯ ಬೆಳವಣಿಗೆಗೆ ಹೊಸ ರೂಪ ನೀಡಬಹುದಿತ್ತು. ಸುಮಾರು 2.85 ಲಕ್ಷ ಮತಗಳ ಅಂತರದಿಂದ ಲೋಕಕಸಭೆಗೆ ಆಯ್ಕೆಯಾದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಆಸಕ್ತಿ, ಬದ್ಧತೆ ಪ್ರದರ್ಶಿಸಬೇಕಿತ್ತು ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
5 ಲಕ್ಷ ರು.ವರೆಗೆ ಯಾವುದೇ ತೆರಿಗೆ ಮಿತಿ ಇಲ್ಲದ ಸಂದರ್ಭದಲ್ಲಿ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರ ನಿರೀಕ್ಷಿಸಿದಷ್ಟು ತೆರಿಗೆ ಪಾವತಿಸಿದ್ದರು. ಅವರಿಗೆ ವಿನಾಯ್ತಿ ನೀಡಿ ಹೊರೆಯನ್ನು ತಪ್ಪಿಸಬಹುದಿತ್ತು. ಆದರೆ, ತೆರಿಗೆ ಮಿತಿಯನ್ನು 3 ಲಕ್ಷ ರು.ಗೆ ಇಳಿಸಿರುವುದರಿಂದ ಮಧ್ಯಮ ವರ್ಗದವರಿಗೆ ಸಾಕಷ್ಟು ನಿರಾಸೆಯಾಗಿದೆ.ವಿಕಸಿತ ಭಾರತಕ್ಕೆ ಶಕ್ತಿ
- ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ತೆರಿಗೆ ಮಿತಿಯನ್ನು 3 ಲಕ್ಷ ರು.ಗೆ ಇಳಿಸಿರುವುದು ವೇತನದಾರರು ಹಾಗೂ ಮಧ್ಯಮವರ್ಗದವರಿಗೆ ಆರ್ಥಿಕ ಹೊರೆಯಾಗಿದೆ. ಈ ತೆರಿಗೆ ಮಿತಿಯನ್ನು 5 ಲಕ್ಷ ರು.ನಿಂದ ಕನಿಷ್ಠ 7 ಲಕ್ಷ ರು. ಗರಿಷ್ಠ 10 ಲಕ್ಷ ರು.ವರೆಗೆ ವಿನಾಯ್ತಿ ನೀಡಬಹುದೆಂದು ನಿರೀಕ್ಷಿಸಲಾಗಿತ್ತು. ಕಳೆದ ಸಾಲಿನಲ್ಲಿ ಕೇಂದ್ರದ ನಿರೀಕ್ಷೆಗೆ ಅನುಗುಣವಾಗಿ ತೆರಿಗೆದಾರರು ತೆರಿಗೆ ಪಾವತಿ ಮಾಡಿದ್ದರು. ಈಗ ತೆರಿಗೆ ಮಿತಿಯನ್ನು 3 ಲಕ್ಷ ರು.ಗೆ ಇಳಿಸಿರುವುದು ನಿರಾಸೆ ಉಂಟುಮಾಡಿದೆ.
-ಸುನಂದಾ ಜಯರಾಂ, ರೈತ ನಾಯಕಿ
ಆತ್ಮಹತ್ಯೆಗೆ ದೂಡುವ ಯತ್ನರೈತರ ಸಾಲಮನ್ನಾ ಮಾಡುವ ವಿಚಾರ ಹಾಗೂ ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸುವ ವಿಷಯವಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಿಲ್ಲ. ವಿದೇಶಿ ಕಾರ್ಪೊರೇಟ್ ಕಂಪನಿಗಳಿಗೆ ತೆರಿಗೆಯಲ್ಲಿ ರಿಯಾಯ್ತಿ ನೀಡಿದ್ದಾರೆ. ಆದರೆ, ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಿಲ್ಲ. ಉಚಿತವಾಗಿ ಉನ್ನತ ಶಿಕ್ಷಣ ನೀಡುವ ಬದಲು ಸಾಲ ಮಾಡಿ ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಸಾಲದ ಸುಳಿಯಲ್ಲಿ ಸಿಕ್ಕಿ ನರಳವುದನ್ನು ತಪ್ಪಿಸಲು ಉದ್ಯೋಗ ನೀಡಬೇಕು. ನಿರುದ್ಯೋಗಿಗಳು ಆತ್ಮಹತ್ಯೆಗೆ ದೂಡುವ ಯತ್ನ ನಿಲ್ಲಬೇಕು. ಕಾರ್ಮಿಕರಿಗೆ ಉದ್ಯೋಗದ ರಕ್ಷಣೆ ಮತ್ತು ದುಡಿಮೆಯ ಅವಧಿ ಹೆಚ್ಚಿಸಿದ್ದಾರೆ. ಇದೊಂದು ವರ್ಣಮಯ ಘೋಷಣೆ ಹೊರತು ಇದರಲ್ಲಿ ಬದುಕಿನ ಭದ್ರತೆಗೆ ಯಾವುದೇ ಯೋಜನೆಗಳಿಲ್ಲದ ಬಜೆಟ್.
- ಎನ್.ಎಲ್. ಭರತ್ ರಾಜ್, ಜಿಲ್ಲಾ ಸಂಚಾಲಕರು, ಕರ್ನಾಟಕ ಪ್ರಾಂತ ರೈತ ಸಂಘಬೇಸರ ತರಿಸಿದ ಬಜೆಟ್
ಕೇಂದ್ರ ಸರ್ಕಾರದ ಬಜೆಟ್ ಬೇಸರ ತರಿಸಿದೆ. ಬರಗಾಲದಿಂದ ಸಂಕಷ್ಟದಲ್ಲಿರುವ ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕಿತ್ತು. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡನೆ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುವಂತೆ ಒತ್ತಾಯಿಸುತ್ತಾ ಬಂದಿದ್ದರೂ ಈ ಯಾವ ವಿಷಯಗಳ ಬಗ್ಗೆ ಬಜೆಟ್ನಲ್ಲಿ ಘೋಷಣೆಯಾಗಿಲ್ಲ.- ಕೀಳಘಟ್ಟ ನಂಜುಂಡಯ್ಯ, ರೈತ ಮುಖಂಡರು, ಮದ್ದೂರು