ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು

KannadaprabhaNewsNetwork |  
Published : Dec 20, 2024, 12:48 AM IST
ಪೋಟೋ೧೯ಸಿಎಲ್‌ಕೆ೩ ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಗೃಹಸಚಿವ ಅಮಿತ್‌ಶಾರವರ ವಿರುದ್ದ ಪ್ರತಿಭಟಿಸಿ, ಮೆರವಣಿಗೆ ನಡೆಸಿದರು. | Kannada Prabha

ಸಾರಾಂಶ

Union Home Minister Amit Shah should resign

-ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಗೃಹಸಚಿವ ಅಮಿತ್‌ ಶಾ ವಿರುದ್ಧ ಪ್ರತಿಭಟನೆ, ಆಕ್ರೋಶ

----

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಕೇಂದ್ರ ಗೃಹಸಚಿವ ಅಮಿತ್‌ ಶಾ ಲೋಕಸಭಾ ಕಾರ್ಯಕಲಾಪ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ಧಾರೆಂದು ಆರೋಪಿಸಿ ಚಳ್ಳಕೆರೆ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರ ಭವನದಿಂದ ವಾಲ್ಮೀಕಿ ವೃತ್ತದ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು,ಮುಖಂಡರು ಭಾಗವಹಿಸಿ ಅಮೀತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು. ಅಂಬೇಡ್ಕರ್‌ ಅವರನ್ನು ಅವಮಾನಿಸಿದ ಗೃಹಸಚಿವ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಓ.ರಂಗಸ್ವಾಮಿ ತಾಲೂಕು ಕೆಡಿಪಿ ಸದಸ್ಯ ಅಂಗಡಿ ರಮೇಶ್, ಸುರೇಶ್, ಹಿರಿಯ ಮುಖಂಡ ಟಿಎಟಿ ಪ್ರಭುದೇವ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚನ್ನಕೇಶವ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಸದಸ್ಯರಾದ ಸುಮ, ಶಿಲ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ವೀರಭದ್ರಪ್ಪ, ಪರಶುರಾಮಪುರ ಅಧ್ಯಕ್ಷ ಶಶಿಧರ, ಕರಕುಶಲ ಪರಿಷತ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾಬಾಯಿ, ಬಿ.ಎಂ.ಭಾಗ್ಯಮ್ಮ, ವಾಣಿ, ಮಂಜುಳಾ, ನಾಮಿನಿ ಸದಸ್ಯರಾದ ಅನ್ವರ್‌ಮಾಸ್ಟರ್, ಬಡಗಿಪಾಪಣ್ಣ, ಆರ್.ವೀರಭದ್ರಪ್ಪ, ನಟರಾಜು, ನನ್ನಿವಾಳ ಬಸವರಾಜು, ನೇತಾಜಿ ಪ್ರಸನ್ನ, ಎಂ.ಚೇತನ್‌ಕುಮಾರ್, ಚೌಳೂರುಪ್ರಕಾಶ್, ಎಲ್‌ಐಸಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ಛಲವಾದಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ: ಅಂಬೇಡ್ಕರ ಅವರನ್ನು ಅವಮಾನಿಸಿದ ಕೇಂದ್ರ ಗೃಹಸಚಿವ ಅಮೀತ್‌ ಶಾ ಅವರ ಭಾವಚಿತ್ರಕ್ಕೆ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಚಪ್ಪಲಿ ಸೇವೆ ನಡೆಸಿ, ಭಾವಚಿತ್ರ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇವರಾಜು, ಓಂಕಾರಮೂರ್ತಿ, ದೊಡ್ಡಲಿಂಗಪ್ಪ, ನಿಜಲಿಂಗಪ್ಪ, ಟಿ.ವಿಜಯಕುಮಾರ್, ಆನಂದ, ಲಕ್ಷ್ಮೀದೇವೆ, ಮಂಜುಳಮ್ಮ ಇದ್ದರು.

----

ಪೋಟೋ: ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ವಿರುದ್ಧ ಪ್ರತಿಭಟಿಸಿ, ಮೆರವಣಿಗೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಾಪುರ ಸೋಮವಾರಪೇಟೆ ಹೋಬಳಿ ಕೇಂದ್ರದಿಂದ ಬೇರ್ಪಡಿಸಿ
ಸಮಾನತೆ ಸಾರಿದ ಮಡಿವಾಳ ಮಾಚಿದೇವ