ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜನ್ಮದಿನಾಚರಣೆ

KannadaprabhaNewsNetwork |  
Published : Dec 17, 2024, 12:45 AM IST
ಕೆ ಕೆ ಪಿ ಸುದ್ದಿ 02: ಮಾಜಿ ಮುಖ್ಯಮಂತ್ರಿ , ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಯವರ ಹುಟ್ಟು ಹಬ್ಬದ ಪ್ರಯುಕ್ತ ನಗರದ ರೋಟರಿ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.  | Kannada Prabha

ಸಾರಾಂಶ

ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ.

ಕನ್ನಡಪ್ರಭ ವಾರ್ತೆ ಕನಕಪುರ

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿಯವರ 65ನೇ ವರ್ಷದ ಹುಟ್ಟುಹಬ್ಬವನ್ನು ಕನಕಪುರದ ರೋಟರಿ ಭವನದಲ್ಲಿ ಕೇಕ್ ಕತ್ತರಿಸಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕೇಕ್ ಕತ್ತರಿಸಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಜೆಡಿಎಸ್ ಅಧ್ಯಕ್ಷ ನಾಗರಾಜು, ದಲಿತರ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಆಶಾಕಿರಣವಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಮಂತ್ರಿಗಳಾಗಿದ್ದು, ರಾಜ್ಯಕ್ಕೆ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ತಾಯಿ ಚಾಮುಂಡೇಶ್ವರಿ ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ತಿಳಿಸಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ ಎಂದು ತಿಳಿಸಿದರು,

ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಮಾತನಾಡಿ, ಕುಮಾರಣ್ಣನವರ ಹುಟ್ಟುಹಬ್ಬಕ್ಕೆ ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಕ್ತದಾನ ಮಾಡುತ್ತಿರುವುದು ಸಂತಸ ತಂದಿದೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ಹಾಗೂ ದೀನ ದಲಿತರಿಗೆ ನೆರವಾಗಲು ದೇವರು ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಹಾರೈಸಿದರು.

ಪಕ್ಷದ ಮುಖಂಡ ನಲ್ಲಹಳ್ಳಿ ಶಿವಕುಮಾರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ, ಸಾರಾಯಿ ನಿಷೇಧ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿ ಜನಮನ್ನಣೆ ಪಡೆದಿದ್ದರು. ಇವರ ಕಾರ್ಯವನ್ನು ಅರಿತ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರನ್ನಾಗಿ ಮಾಡಿ ನಮ್ಮ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಬಲವನ್ನು ತುಂಬಿದ್ದಾರೆ. ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ನಾವು ಮುನ್ನುಗ್ಗಿ ಪಕ್ಷವನ್ನು ಬಲಿಷ್ಠ ವಾಗಿ ಕಟ್ಟೋಣ ಎಂದರು. ಪಕ್ಷದ ಹಿರಿಯ ಮುಖಂಡ ಕೊತ್ತನೂರು ನಾರಾಯಣ್, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಲೋಕೇಶ್, ತಾಲೂಕು ಜೆಡಿಎಸ್ ಉಪಾಧ್ಯಕ್ಷ ರಾಮಕೃಷ್ಣ, ಮಾಜಿ ನಗರಸಭಾ ಸದಸ್ಯ ಪುಟ್ಟರಾಜು, ಸಿದ್ದಮರಿಗೌಡ, ಗೋಪಾಲ್, ರಾಜೇಶ್, ಪಂಚಲಿಂಗೇಗೌಡ, ಕಾಳೇಗೌಡ, ಪವಿತ್ರ, ಶಾಂತಮೇರಿ, ಬಿ.ಟಿ. ನಾಗೇಶ್, ಹೆಗ್ಗನೂರು ಶಿವಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಪಿ. ಕುಮಾರ್, ಅಶೋಕ್, ತಿಮ್ಮೇಗೌಡ, ಮಂಜು, ಶಿವ ಶಂಬುಲಿಂಗೇಗೌಡ ಹಾಜರಿದ್ದರು.

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ:

ಕೂತಗಾನಹಳ್ಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಹುಣಸನಹಳ್ಳಿ ಅತೀಬ್ ಅವರ ಜೊತೆ ಸುಮಾರು 15ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ತಾಲೂಕು ಅಧ್ಯಕ್ಷ ಬಿ ನಾಗರಾಜು ಸಮ್ಮುಖದಲ್ಲಿ ಇದೇ ವೇಳೆ ಸೇರ್ಪಡೆಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ