ಜಾರ್ಖಂಡ್‌ನಿಂದ ಶವ ತರಿಸಲು ಕೇಂದ್ರ ಸಚಿವ ಎಚ್ಡಿಕೆ ನೆರವು

KannadaprabhaNewsNetwork |  
Published : Jul 07, 2026, 01:45 AM IST
7ಎಚ್ಎಸ್ಎನ್4 : ಹೊಳೆನರಸೀಪುರ ತಾ. ನಗರ್ತಿಯ ದೇವರಾಜು ಪುತ್ರ ಹಾಗೂ ಕಂಟೈನರ್ ಚಾಲಕ ಯಶವಂತ್ ಎನ್.ಡಿ. ಜಾಖಂಡ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. | Kannada Prabha

ಸಾರಾಂಶ

ಸೋಮವಾರ ಮೃತದೇಹವು ಸ್ವಗ್ರಾಮಕ್ಕೆ ಆಗಮಿಸಿತು. ನಂತರ ಅಂತ್ಯಕ್ರಿಯೆ ನಡೆಯಿತು. ಮೃತರಿಗೆ ತಂದೆ- ತಾಯಿ, ಹಿರಿಯ ಸಹೋದರಿ ಇದ್ದಾರೆ. ಬಡ ರೈತ ಕುಟುಂಬದ ಆಧಾರ ಸ್ಥಂಬದಂತಿದ್ದ ಒಬ್ಬನೇ ಮಗನನ್ನು ಕಳೆದುಕೊಂಡಿದ್ದ ಪೋಷಕರ ಪರಿಸ್ಥಿತಿಯನ್ನು ಶಾಸಕ ರೇವಣ್ಣ ಅವರಿಗೆ ತಿಳಿಸಿದಾಗ ಪೋಷಕರ ಸಂಕಷ್ಟವನ್ನು ಅರ್ಥೈಸಿಕೊಂಡು, ಅಗತ್ಯ ವ್ಯವಸ್ಥೆ ಕಲ್ಪಿಸಿ, ಮೃತದೇಹ ತರಿಸಿಕೊಡುವಲ್ಲಿ ಶಾಸಕರ ಕಾರ್ಯ ಶ್ಲಾಘನೀಯ ಎಂದು ಅರ್ಚಕ ನಾಗರಾಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ತಾಲೂಕಿನ ನಗರ್ತಿ ಗ್ರಾಮದ ದೇವರಾಜು ಪುತ್ರ ಯಶವಂತ್ ಎನ್.ಡಿ. (೨೧) ಅವರು ಜುಲೈ ೫ರಂದು ಜಾಖಂಡ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಸಹಕಾರದಲ್ಲಿ ಶಾಸಕ ಎಚ್. ಡಿ. ರೇವಣ್ಣ ಅವರು ಮೃತದೇಹವನ್ನು ಸ್ವಗ್ರಾಮಕ್ಕೆ ತರಿಸಿಕೊಟ್ಟು, ಬಡ ರೈತ ಕುಟುಂಬದ ಸಂಕಷ್ಟಕ್ಕೆ ನೆರವಾಗಿದ್ದಾರೆ.

ಕಂಟೈನರ್‌ ಚಾಲಕನಾಗಿದ್ದ ಯಶವಂತ್ ಅಪಘಾತದಲ್ಲಿ ಮೃತಪಟ್ಟಿದ್ದರು ಹಾಗೂ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಸಾಧ್ಯವಾಗದೇ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಷಯವನ್ನು ಗ್ರಾಮಸ್ಥರು ಶಾಸಕ ಎಚ್. ಡಿ. ರೇವಣ್ಣ ಅವರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದ ತಕ್ಷಣವೇ ಸ್ಪಂದಿಸಿದ ಶಾಸಕರು ಸಹೋದರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೊಬೈಲ್‌ನಲ್ಲಿ ಪರಿಸ್ಥಿತಿಯ ವಿವರ ನೀಡಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಎಚ್. ಡಿ. ಕುಮಾರಸ್ವಾಮಿ ಅವರು ಮೃತ ಚಾಲಕನ ಪೋಷಕರಿಗೆ ಕರೆ ಮಾಡಿ ಸಾಂತ್ವನ ಹೇಳಿ, ಜಾರ್ಖಂಡ್‌ನಿಂದ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಅಗತ್ಯ ವ್ಯವಸ್ಥೆ ಮಾಡುವುದಾಗಿ ತಿಳಿಸಿ, ಅದರಂತೆ ಸೋಮವಾರ ಮೃತದೇಹವು ಸ್ವಗ್ರಾಮಕ್ಕೆ ಆಗಮಿಸಿತು. ನಂತರ ಅಂತ್ಯಕ್ರಿಯೆ ನಡೆಯಿತು. ಮೃತರಿಗೆ ತಂದೆ- ತಾಯಿ, ಹಿರಿಯ ಸಹೋದರಿ ಇದ್ದಾರೆ. ಬಡ ರೈತ ಕುಟುಂಬದ ಆಧಾರ ಸ್ಥಂಬದಂತಿದ್ದ ಒಬ್ಬನೇ ಮಗನನ್ನು ಕಳೆದುಕೊಂಡಿದ್ದ ಪೋಷಕರ ಪರಿಸ್ಥಿತಿಯನ್ನು ಶಾಸಕ ರೇವಣ್ಣ ಅವರಿಗೆ ತಿಳಿಸಿದಾಗ ಪೋಷಕರ ಸಂಕಷ್ಟವನ್ನು ಅರ್ಥೈಸಿಕೊಂಡು, ಅಗತ್ಯ ವ್ಯವಸ್ಥೆ ಕಲ್ಪಿಸಿ, ಮೃತದೇಹ ತರಿಸಿಕೊಡುವಲ್ಲಿ ಶಾಸಕರ ಕಾರ್ಯ ಶ್ಲಾಘನೀಯ ಎಂದು ಅರ್ಚಕ ನಾಗರಾಜು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ಕೋಟಿಗೂ ಅಧಿಕ ವಿಮೆ ಹಣ ಅರ್ಹ ರೈತರಿಗೆ ವಿತರಣೆ: ಸಿ.ಶಿವಕುಮಾರ್
ಕೃಷಿ ಕ್ಷೇತ್ರದಲ್ಲಿ ಜಗಜೀವನ್ ರಾಮ್‌ ಪಾತ್ರ ಅಪಾರ: ಲೋಕೇಶ್