ಕನ್ನಡಪ್ರಭ ವಾರ್ತೆ ಮಂಡ್ಯ
ಪತ್ರಿಕಾ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರೊಂದಿಗೆ ದೆಹಲಿಯಿಂದ ದೂರವಾಣಿ ಕರೆ ಮಾಡಿ ಮಾತನಾಡಿದ ಕೇಂದ್ರ ಸಚಿವರು, ತಕ್ಷಣವೇ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ನಿರ್ದೇಶನ ನೀಡಿದರು.
ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಈವರೆಗೆ ಯಾವ ಯಾವ ಕೆರೆಗಳನ್ನು ತುಂಬಿಸಿಲ್ಲವೋ ಆ ಕೆರೆಗಳಿಗೆ ತಕ್ಷಣವೇ ನೀರು ತುಂಬಿಸಲು ಕ್ರಮ ವಹಿಸಿ ಎಂದು ಕೇಂದ್ರ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆಕನ್ನಡಪ್ರಭ ವಾರ್ತೆ ಮಂಡ್ಯ
ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಒಳ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಯದಲ್ಲಾದರೂ 1.20 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಯಬಿಡುವ ಸಾಧ್ಯತೆಗಳಿರುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ರೈತರು, ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜಮೀನುಗಳಿಗೆ ಕೃಷಿ ಚಟುವಟಿಕೆಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಸೂಚಿಸಲಾಗಿದೆ. ನದಿ ಪಾತ್ರ, ಸೇತುವೆ, ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.