ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘಕ್ಕೆ ಅವಿರೋಧ ಆಯ್ಕೆ

KannadaprabhaNewsNetwork |  
Published : Oct 09, 2025, 02:01 AM IST
ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘದ ನೂತನ ಅಧ್ಯರಾಗಿ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷ ಅಜೀತ ಮುನ್ನೋಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು | Kannada Prabha

ಸಾರಾಂಶ

ಮಾಜಿ ಸಂಸದ ರಮೇಶ ಕತ್ತಿ ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ಶಾಸಕ ನಿಖಿಲ ಕತ್ತಿ ಮಾರ್ಗದರ್ಶನದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷರಾಗಿ ಅಜೀತ ಮುನ್ನೋಳಿ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಸಂಘದ ಸಭಾಭವನದಲ್ಲಿ ಬುಧವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಜೀತ ಮುನ್ನೋಳಿ ಅವರ ನಾಮಪತ್ರ ಒಂದೇ ಸಲ್ಲಿಕೆಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಘೋಷಿಸಿದರು.

ಮಾಜಿ ಸಂಸದ ರಮೇಶ ಕತ್ತಿ ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ಶಾಸಕ ನಿಖಿಲ ಕತ್ತಿ ಮಾರ್ಗದರ್ಶನದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಕುಟುಂಬ ರಾಜಕೀಯಕ್ಕೆ ಮಣೆ ಹಾಕದೇ ಅಧ್ಯಕ್ಷ ಸ್ಥಾನವನ್ನು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಹುಕ್ಕೇರಿ ಪಟ್ಟಣದ ಜೈನ ಸಮುದಾಯದ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಯಮಕನಮರಡಿಯ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದ ಲಿಂಗಾಯತ ಸಮುದಾಯದ ಅಜೀತ ಮುನ್ನೋಳಿಗೆ ನೀಡಲಾಗಿದೆ.

ಇತ್ತೀಚೆಗೆ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದ ಅಪಣ್ಣಗೌಡ ಪಾಟೀಲ ಪೆನಲ್ ಹಾಗೂ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಎ.ಬಿ.ಪಾಟೀಲ ನೇತೃತ್ವದ ಸ್ವಾಭಿಮಾನಿ ಪೆನಲ್ ಗಳ ನಡುವೆ ನಡೆದ ತೀವ್ರ ಜಿದ್ದಾ ಜಿದ್ದಿನ ಚುನಾವಣೆಯಲ್ಲಿ ಸ್ವಾಭಿಮಾನ ಪೆನಲ್‌ನ ಎಲ್ಲ 15 ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ನಿರ್ದೇಶಕರಾದ ಪೃಥ್ವಿ ಕತ್ತಿ, ವಿನಯ ಪಾಟೀಲ, ಸತ್ಯಪ್ಪಾ ನಾಯಿಕ, ಗಜಾನನ ಕ್ವಳ್ಳಿ, ಕಲಗೌಡ ಪಾಟೀಲ, ನಂದು ಮುಡಸಿ, ಕೆಂಪಣ್ಣ ವಾಸೇದಾರ, ಶಿವನಗೌಡ ಮದವಾಲ, ಮಹಾದೇವ ಕ್ಷೀರಸಾಗರ, ಸನ್ನಾಯಿಕ ಶ್ರೀಮಂತ, ಬಸವಣ್ಣಿ ಲಂಕೆಪ್ಪಗೋಳ, ಮಹಬೂಬಿ ನಾಯಕವಾಡಿ, ಮಂಗಲ ಮೂಡಲಗಿ , ಹಿರಾಶುಗರ ಕಾರ್ಖಾನೆಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪಾ ಕರ್ಕಿನಾಯಿಕ, ಬಸವರಾಜ ಹುಂದ್ರಿ, ಪಿಕಾರ್ಡ್‌ ಬ್ಯಾಂಕಿನ ದುರದುಂಡಿ ಪಾಟೀಲ, ಶೀಥಲ ಬ್ಯಾಳಿ, ಗುರು ಕುಲಕರ್ಣಿ, ರಾಜು ಮುನ್ನೋಳಿ, ರಾಚಯ್ಯ ಹಿರೇಮಠ, ಉದಯ ಹುಕ್ಕೇರಿ, ಸುನೀಲ ಪರ್ವತರಾವ್, ರೋಹನ ನೇಸರಿ, ಮಲ್ಲಪ್ಪಾ ಬಿಸಿರೊಟ್ಟಿ, ಅಶೋಕ ಪಾಟೀಲ, ಶಿವನಗೌಡ ಪಾಟೀಲ, ಶ್ರೀಶೈಲ್ ಯಮಕನಮರಡಿ, ಗುರುನಾಥ ಕಡೇಲಿ, ರಾಜು ಮಗದುಮ್ಮ, ಸುರೇಶ ಜಿನರಾಳಿ, ಎ.ಕೆ ಪಾಟೀಲ. ಶಹಜಾನ ಬಡಗಾವಿ, ಇಲಿಯಾಸ ಅತ್ತಾರ, ರಿಯಾಜ ಮೋಮಿನ, ವಿವಿಧ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ