ಬಿಡದ ಮಳೆ: ಜನ ಜೀವನ ತತ್ತರ

KannadaprabhaNewsNetwork |  
Published : Aug 02, 2026, 01:15 AM IST
೦೧ಬಿಹೆಚ್‌ಆರ್ ೧: ಬಾಳೆಹೊನ್ನೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭದ್ರಾನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. | Kannada Prabha

ಸಾರಾಂಶ

ಬಾಳೆಹೊನ್ನೂರುಬಾಳೆಹೊನ್ನೂರು, ಖಾಂಡ್ಯ ಹಾಗೂ ಮೇಗುಂದಾ ಹೋಬಳಿ ವಿವಿಧೆಡೆಗಳಲ್ಲಿ ಪುಷ್ಯ ಮಳೆ ಅಬ್ಬರ ಶನಿವಾರವೂ ಮುಂದುವರಿದಿದ್ದು, ನಿರಂತರ ಮಳೆಯಿಂದ ಜನ ಜೀವನ ತತ್ತರಿಸಿದೆ.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಬಾಳೆಹೊನ್ನೂರು, ಖಾಂಡ್ಯ ಹಾಗೂ ಮೇಗುಂದಾ ಹೋಬಳಿ ವಿವಿಧೆಡೆಗಳಲ್ಲಿ ಪುಷ್ಯ ಮಳೆ ಅಬ್ಬರ ಶನಿವಾರವೂ ಮುಂದುವರಿದಿದ್ದು, ನಿರಂತರ ಮಳೆಯಿಂದ ಜನ ಜೀವನ ತತ್ತರಿಸಿದೆ.

ಕಳೆದ ನಾಲ್ಕು ದಿನಗಳಿಂದ ಪುಷ್ಯ ಮಳೆ ಈ ಭಾಗದಲ್ಲಿ ಭರ್ಜರಿಯಾಗಿ ಬರುತ್ತಿದೆ. ಶನಿವಾರ ತನ್ನ ಅಬ್ಬರ ಮುಂದುವರಿಸಿದೆ. ಶನಿವಾರ ಇಡೀ ದಿನ ಎಡೆಬಿಡದೆ ಧಾರಾಕಾರ ಮಳೆ ಸುರಿದು ಜನರು ಮನೆಯಿಂದ ಆಚೆ ಬರಲು ಯೋಚಿಸುವಂತಾಗಿತ್ತು. ನಿರಂತರ ಗಾಳಿ, ಮಳೆಯಿಂದ ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ್ದು, ಮಳೆಯ ಪ್ರಮಾಣ ಹೆಚ್ಚಾದ ಕಾರಣ ಕಾಫಿ ತೋಟಗಳಲ್ಲೂ ಸಹ ಹಲವು ಕಡೆಗಳಲ್ಲಿ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲಾಗಿತ್ತು.

ಬಾಳೆಹೊನ್ನೂರು ಭಾಗದಲ್ಲಿ ಮಾತ್ರವಲ್ಲದೆ ಭದ್ರಾ ನದಿ ಉಗಮ ಸ್ಥಾನ ಗಂಗಾಮೂಲ, ಕುದುರೆಮುಖ, ಕಳಸ, ಬಾಳೆಹೊಳೆ, ಮಾಗುಂಡಿ ಮುಂತಾದ ಕಡೆಗಳಲ್ಲಿ ಸಹ ನಿರಂತರ ಮಳೆಯಾಗುತ್ತಿರುವ ಕಾರಣ ಭದ್ರಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೌದ್ರಾವತಾರ ತಾಳಿ ಹರಿಯುತ್ತಿರುವ ಭದ್ರಾನದಿಯಲ್ಲಿ ಬಾರೀ ಪ್ರಮಾಣದಲ್ಲಿ ಕಸಕಡ್ಡಿ ಗಳೊಂದಿಗೆ ಬೃಹತ್ ಗಾತ್ರದ ಒಣಗಿದ ಮರಗಳು ತೇಲಿ ಬರುತ್ತಿದೆ.

ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದಂತೆ ಪ್ರವಾಹದ ಆತಂಕ ಎದುರಾಗಿದೆ. ನದಿಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿ ದಡದ ಕೆಲವು ತೋಟ, ಗದ್ದೆಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗಿದೆ.

ಬಾಳೆಹೊನ್ನೂರು ಹೋಬಳಿ ಯಾವುದೇ ಭಾಗದಲ್ಲಿ ಮಳೆಗೆ ಹಾನಿಗಳು ವರದಿಯಾಗಿಲ್ಲ. ನಿರಂತರ ಗಾಳಿ, ಮಳೆ ಯಿದ್ದರೂ ಸಹ ಈ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದೇ ಇದ್ದು, ಮೆಸ್ಕಾಂ ಸಿಬ್ಬಂದಿ ಶ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.೦೧ಬಿಹೆಚ್‌ಆರ್ ೧:

ಬಾಳೆಹೊನ್ನೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭದ್ರಾನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಜಾಪ್ರಭುತ್ವದ ಭದ್ರ ಅಡಿಪಾಯಕ್ಕೆ ಎಸ್‌ಐಆರ್‌ನಲ್ಲಿ ಭಾಗಿಯಾಗಿ
ವ್ಯಸನಮುಕ್ತ ಸಮಾಜಕ್ಕೆ ಯುವಕರ ಪಾತ್ರ ಮುಖ್ಯ