- ಜಿಲ್ಲೆಯ 9 ತಾಲೂಕುಗಳ ಪೈಕಿ ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆ, 281 ಮನೆಗಳಿಗೆ ಹಾನಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಕಾಫಿಯ ನಾಡು ಪೂರ್ಣ ಪ್ರಮಾಣದಲ್ಲಿ ಈ ಬಾರಿ ಮಳೆ ನಾಡಾಗಿದೆ. ಈವರೆಗೆ ಪೂರ್ಣ ಪ್ರಮಾಣದಲ್ಲಿ ಬಿಡುವು ನೀಡಿಲ್ಲ, ಭಾನುವಾರವೂ ಕೂಡ ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. ಹೀಗಾಗಿ ರೈತರು ಸೇರಿದಂತೆ ಎಲ್ಲಾ ವರ್ಗದವರ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಿದೆ.ಜಿಲ್ಲೆಯಲ್ಲಿ ಜನವರಿ 1 ರಿಂದ ಅಕ್ಟೋಬರ್ 24 ರವರೆಗೆ ಸರಾಸರಿ ವಾಡಿಕೆ ಮಳೆ 1738 ಮೀ.ಮೀ. ಆದರೆ, ಈ ವರ್ಷದಲ್ಲಿ ಇದೇ ಅವಧಿಯಲ್ಲಿ ಬಂದಿರುವ ಮಳೆ 1950 ಮಿ.ಮೀ. ಅಂದರೆ, ಒಟ್ಟಾರೆ ಶೇ. 12 ರಷ್ಟು ಹೆಚ್ಚುವರಿ ಮಳೆಯಾಗಿದೆ. ಜಿಲ್ಲೆಯ 9 ತಾಲೂಕುಗಳ ಪೈಕಿ ಅತಿ ಹೆಚ್ಚು ಅಂದರೆ ಶೇ. 115 ರಷ್ಟು ಮಳೆ ಚಿಕ್ಕಮಗಳೂರು ತಾಲೂಕಿನಲ್ಲಿ ಬಂದಿದೆ.
ಮಳೆಯಿಂದಾಗಿ ಅಜ್ಜಂಪುರ, ಕಡೂರು ಹಾಗೂ ತರೀಕೆರೆ ತಾಲೂಕುಗಳಲ್ಲಿ ಈರುಳ್ಳಿ ಬೆಳೆ ಹಾಳಾಯಿತು. ಸದ್ಯ ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆಯಲ್ಲಿ ಅಡಕೆ ಕೊಯ್ಲು ಆರಂಭವಾಗಬೇಕಿತ್ತು. ಮಳೆಯಿಂದ ಕೊಯ್ಲು ಮುಂದೂಡುವ ಪರಿಸ್ಥಿತಿ ಬಂದಿದೆ. ಇದು, ಅನಿವಾರ್ಯತೆಯಾದರೂ ಇಳುವರಿ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿದೆ.ಮನೆಗಳಿಗೆ ಹಾನಿ: ನಿರಂತರ ಮಳೆ, ಗಾಳಿಗೆ ಹಲವೆಡೆ ಭೂ ಕುಸಿತ, ಮನೆಗಳಿಗೆ ಹಾನಿ ಉಂಟಾಗಿದೆ. ಈವರೆಗೆ 281 ಮನೆ ಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಮನೆಗಳಿಗೆ ಹೆಚ್ಚು ಹಾನಿಯಾಗಿದೆ. ಐದು ಮಂದಿ ಮೃತಪಟ್ಟಿದ್ದಾರೆ. 11 ಜಾನುವಾರುಗಳು ಮೃತಪಟ್ಟಿವೆ.
ಕಡೂರು, ಅಜ್ಜಂಪುರ ತಾಲೂಕುಗಳ ಹೊರತುಪಡಿಸಿ ಇನ್ನುಳಿದ 7 ತಾಲೂಕುಗಳಲ್ಲಿ ಮಳೆಯಿಂದಾಗಿ ರಸ್ತೆಗಳಿಗೆ ಹಾನಿ ಸಂಭವಿಸಿದೆ. 496.15 ಕಿ.ಮೀ. ರಸ್ತೆಗಳು ಹಾಗೂ 66 ಸೇತುವೆಗಳಿಗೆ ಹಾನಿ ಸಂಭವಿಸಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್.ಆರ್.ಪುರ ತಾಲೂಕುಗಳಲ್ಲಿ ರಸ್ತೆಗಳಲ್ಲಿ ಹೆಚ್ಚು ಹಾನಿ ಸಂಭವಿಸಿದೆ.
-- --ಚಿಕ್ಕಮಗಳೂರು115
ಕಡೂರು29
ತರೀಕೆರೆ29
ಅಜ್ಜಂಪುರ17
-- --ಕೊಪ್ಪ 22
-- --ಶೃಂಗೇರಿ37
-- --ಮೂಡಿಗೆರೆ29
-- --ಕಳಸ 19
-- --ಎನ್.ಆರ್.ಪುರ37