ಹುಬ್ಬಳ್ಳಿ:
ನಗರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಹಿಂದೂ ಶಕ್ತಿ ಸೇನಾ ಸಂಘಟನೆ ಉದ್ಘಾಟಿಸಿ ಮಾತನಾಡಿದ ಅವರು, 2028ರಲ್ಲಿ ಕರ್ನಾಟಕದಲ್ಲಿ ರಾಷ್ಟ್ರಧ್ವಜ ಜತೆಗೆ ಭಗವಾಧ್ವಜ ಹಾರಾಡುವಂತಾಗಬೇಕು. ಅದಕ್ಕಾಗಿ ಹಿಂದೂಗಳೆಲ್ಲರೂ ಒಂದಾಗಬೇಕೆಂದರು.
ಹಿಂದೂಗಳು ಒಗ್ಗಟ್ಟಾಗಿ ಮುಸ್ಲಿಂರನ್ನು ಆರ್ಥಿಕವಾಗಿ ಬಲಹೀನರನ್ನಾಗಿ ಮಾಡಬೇಕು. ವಿಜಯಪುರದಲ್ಲಿ ಹಿಂದೂಗಳ ವ್ಯಾಪಾರಕ್ಕೆ ವಿಶೇಷ ವ್ಯವಸ್ಥೆ ಮಾಡಿದ್ದರಿಂದ ನಮ್ಮ ಜನ ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿದ್ದಾರೆ. ಇದೇ ರೀತಿ ಹಿಂದೂಗಳ ಬಳಿಯೇ ವ್ಯಾಪಾರ ಮಾಡುವಂತಹ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.ಮುಸ್ಲಿಂರ ರೇಷನ್ ಕಾರ್ಡ್, ವೋಟಿಂಗ್ ಬಂದ್ ಮಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂದ ಅವರು, ಮುಂಬರುವ ದಿನಗಳಲ್ಲಿ ಎಸ್ಐಆರ್ ನಡೆಯಲಿದ್ದು, ಹಿಂದೂಗಳ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕೆಂದರು.
ಶ್ರೀರಾಮಸೇನೆ ರಾಷ್ಟ್ರೀಯ ಸಂಚಾಲಕ ಪ್ರಮೋದ ಮುತಾಲಿಕ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ನಾಶವಾದರೆ ಮಾತ್ರ ನೆಮ್ಮದಿ ಇರುತ್ತದೆ. ಆ ಪಕ್ಷದಿಂದ ತುಷ್ಟೀಕರಣದ ಕಾರಣಕ್ಕೆ ಹಿಂದೂಗಳ ಮೆರವಣಿಗೆ ಮೇಲೆ ಕಲ್ಲೆ ಎಸೆಯುವಂತಹ ಘಟನೆಗಳನ್ನು ನಡೆಯುತ್ತಿವೆ. ಅಂತಹವನ್ನು ಹದ್ದು ಬಸ್ತಿನಲ್ಲಿಡಬೇಕಿದೆ. ಬಿಜೆಪಿಯವರು ಕೂಡ ನಾಟಕ ಮಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಹಿಂದೂ ಶಕ್ತಿ ಸೇನಾ ಸಂಘಟನೆ ವೆಬ್ಸೈಟ್ ಲೋಕಾರ್ಪಣೆ ಮಾಡಲಾಯಿತು. ಸಂಘಟನೆ ಅಧ್ಯಕ್ಷ ಈರಣ್ಣ ಶಿರಗುಪ್ಪಿ, ಸಂಸ್ಥಾಪಕ ಪ್ರಭುಸ್ವಾಮಿ ಹಾಗೂ ಇತರರು ಇದ್ದರು,