ಹೊಸಕೋಟೆ: ಬಾಬಾ ಸಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಹಸೀಲಾರ್ ಸೋಮಶೇಖರ್, ಇಒ ಡಾ. ನಾರಾಯಣಸ್ವಾಮಿ, ನಗರಸಭಾಧ್ಯಕ್ಷೆ ಆಶಾ ರಾಜಶೇಖರ್, ಬಿಇಒ ಪದ್ಮನಾಭ್, ಪೊಲೀಸ್ ನಿರೀಕ್ಷಕ ಅಶೋಕ್, ಕೆಪಿಸಿಸಿ ಯುವ ಘಟಕದ ಜಿಲ್ಲಾಧ್ಯಕ್ಷ ಗುಟ್ಟಳ್ಳಿ ನಾಗರಾಜ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವ್ ಮೂರ್ತಿ, ನಿರ್ದೇಶಕ ಡಾ.ಎಚ್.ಎಂ.ಸುಬ್ಬರಾಜ್, ಮುಖಂಡರಾದ ಬಿ.ವಿ.ಬೈರೇಗೌಡ, ವಿ.ವಿಜಯ್ ಕುಮಾರ್, ಡಿಎಂ ಮುನಿರಾಜ್ ಇತರರು ಭಾಗವಹಿಸಿದ್ದರು.ಫೋಟೋ: 25 ಹೆಚ್ಎಸ್ಕೆ 4 ಮತ್ತು 5
4. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣ.
5: ಹೊಸಕೋಟೆಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು.