ಕನ್ನಡಪ್ರಭ ವಾರ್ತೆ ಮಂಡ್ಯ
ನಂತರ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ ಶ್ರೀಗಳು, ಮಕ್ಕಳ ಹೇಳ್ಗೆಯಲ್ಲಿ ತಾಯಂದಿರ ಪಾತ್ರ ಅಪಾರವಾದುದು. ನಿಸ್ವಾರ್ಥ ಪ್ರೀತಿ ತ್ಯಾಗ ಮತ್ತು ತಾಳ್ಮೆಯಿಂದ ಮಕ್ಕಳ ಬೆಳವಣಿಗೆಗೆ ಸಹಕಾರ ಮೂರ್ತಿಯಾಗಿ ಕಾಣುತ್ತಾರೆ ಎಂದರು.
ಸಮಾಜ ಹೇಳಿಗೆಗೆ ಶ್ರಮಿಸಿದ ನಾಯಕರ ಪ್ರತಿಮೆಯನ್ನು ಗ್ರಾಮದಲ್ಲಿ ಸ್ಥಾಪಿಸಿದ್ದು ಯುವ ಜನಾಂಗ ಇವರ ಆದರ್ಶ ಮೈಗೂಡಿಸಿಕೊಳ್ಳಬೇಕು. ತಾಯಂದಿರು ಮನಸು ಮಾಡಿದರೆ ತಪ್ಪು ದಾರಿಯಲ್ಲಿ ಹೋಗುವ ಮಕ್ಕಳನ್ನು ಸರಿದಾರಿಗೆ ತರುವ ಶಕ್ತಿ ಇದ್ದು, ಬಾಲ್ಯದಲ್ಲಿಯೇ ಮಕ್ಕಳನ್ನು ತಿದ್ದುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಶ್ರೀಮಠವು ಹೆಸರುವಾಸಿಯಾಗಿದೆ. ಜ್ಞಾನದ ವಿಷಯಕ್ಕೆ ಹೆಚ್ಚು ಒತ್ತು ನೀಡಿರುವ ಶ್ರೀಮಠವು ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ನೆರವಾಗಿರುವುದು ಮೆಚ್ಚುವ ಕೆಲಸ ಎಂದು ಶ್ಲಾಘಿಸಿದರು.
ಈ ವೇಳೆ ಜಲ ಸಂಪನ್ಮೂಲ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಸತೀಶ್, ಕಾರ್ಯಕ್ರಮ ಸಂಯೋಜಕ ಶಿವಕುಮಾರ್ ಯರಹಳ್ಳಿ, ಮುಖಂಡರಾದ ಪುಟ್ಟಸ್ವಾಮಿ, ದೇವೇಗೌಡ ಭಾಗವಹಿಸಿದ್ದರು.