ಶೋಷಿತರ ಉದ್ಧಾರ ನಾರಾಯಣ ಗುರುಗಳ ಬದುಕಿನ ಗುರಿಯಾಗಿತ್ತು: ಬಿಪಿನ್ ಚಂದ್ರಪಾಲ್‌

KannadaprabhaNewsNetwork |  
Published : Sep 09, 2025, 01:01 AM IST
*ಕಾರ್ಕಳ‌ ಕಾಂಗ್ರೇಸ್ ಆಶ್ರಯದಲ್ಲಿ ನಾರಾಯಣಗುರು ಜಯಂತಿ* | Kannada Prabha

ಸಾರಾಂಶ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಕಾರ್ಕಳ: ಸಮಾಜದ ಶೋಷಿತ ವರ್ಗಗಳ ಬದುಕಿನ ಹೊಸ ಜೀವನೋತ್ಸಾಹದ ಮಾರ್ಗಾನ್ವೇಷಣೆಯೇ ಬ್ರಹ್ಮಶ್ರೀ ನಾರಾಯಣ ಗುರುಗಳ ಬದುಕಿನ ಹೋರಾಟದ ಗುರಿಯಾಗಿತ್ತು. ಆ ಹೋರಾಟದಲ್ಲಿ ಅಂಧ ಶ್ರದ್ಧೆಗಳ ನಿವಾರಣೆ, ಶೈಕ್ಷಣಿಕ ಸಾಮಾಜಿಕ ಸ್ವಾತಂತ್ರ್ಯ, ಬದುಕಿನ ಸ್ವಾಯತ್ತತೆ ಅಡಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ ಚಂದ್ರಪಾಲ್ ನಕ್ರೆ ಹೇಳಿದ್ದಾರೆ.ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ನ್ಯಾಯವಾದಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖರ ಮಡಿವಾಳ ಮಾತಾಡಿ, ಜನಾಂಗೀಯ ಸಂಕುಚಿತತೆ, ದ್ವೇಷ, ಮತೀಯತೆ, ಅಸೂಯೆಗಳನ್ನು ಬದಿಗಿಟ್ಟು ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕ ಕ್ರಾಂತಿಯ ಮೂಲಕ ಸಮ ಸಾಮಾಜ ಕಟ್ಟ ಬೇಕೆನ್ನುವುದು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯವಾಗಿತ್ತು ಎಂದರು.ಅಧ್ಯಕ್ಷತೆ ವಹಿಸಿ ಮಾತಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದಾ ರಾವ್, ಕಾಂಗ್ರೆಸ್ ಪಕ್ಷ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ತನ್ನ ಆಡಳಿತದ ಜನಪರ ಚಿಂತನೆಯ ರಾಜಧರ್ಮವನ್ನಾಗಿ ಮಾಡಿಕೊಂಡಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದರು.ಗ್ಯಾರಂಟಿ ‌ಸಮಿತಿ‌ ಅದ್ಯಕ್ಷ‌ ಅಜಿತ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯನ್, ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ ಗ್ರಾಮ ಉಸ್ತುವಾರಿ ಉದಯ ಶೆಟ್ಟಿ ಕುಕ್ಕುಂದೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ ಪೂಜಾರಿ ಮಾತಾಡಿದರು.ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು ವಿಶ್ವನಾಥ ಭಂಡಾರಿ ನಿಂಜೂರು, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ, ಪಳ್ಳಿ - ನಿಂಜೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿಲ್ಸನ್ ಲೋಬೊ ಹಿರಿಯ ಕಾಂಗ್ರೆಸ್ಸಿಗ ಪಳ್ಳಿ - ನಿಂಜೂರು ಗ್ರಾಮೀಣ ಕಾಂಗ್ರೆಸ್ ಕೃಷಿ ಘಟಕದ ಅಧ್ಯಕ್ಷ ಸುಬ್ಬಯ್ಯ ಶೆಟ್ಟಿ ನಿಂಜೂರು, ಗ್ಯಾರಂಟಿ ಸಮಿತಿ ಸದಸ್ಯರಾದ ಸಂತೋಷ ಶೆಟ್ಟಿ ನಿಂಜೂರು, ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಆಚಾರ್ಯ ಪಳ್ಳಿ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸುಜೀತ್ ಪೂಜಾರಿ ನಿಂಜೂರು ಮತ್ತಿತರರಿದ್ದರು.

ಪಳ್ಳಿ ಪಂಚಾಯಿತಿ ಸದಸ್ಯ ವಿಜಯ ಎಂ. ಶೆಟ್ಟಿ ಪಳ್ಳಿ ಸ್ವಾಗತಿಸಿದರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ದಿನಕರ ಶೆಟ್ಟಿ ವಂದಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಕಳ ಬ್ಲಾಕ್ ಮಾಜಿ ಅಧ್ಯಕ್ಷ ರಘುಶ್ಚಂದ್ರನಾಥ್ ನಿರೂಪಿಸಿದರು.

PREV

Recommended Stories

ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು